ಮೂಡಲಗಿ: ಮತದಾರರ ಮುಂದೆ ಕಾಂಗ್ರೆಸ್ ನವರ ಹಣಬಲ, ತೋಳ್ಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ. ಜೊತೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಫಲ ನೀಡಲಿಲ್ಲ. ಅವರು ಗೆಲುವಿಗೆ ಶತ ಪ್ರಯತ್ನ ಮಾಡಿದರೂ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವಕ್ಕೆ ಮತದಾರ ಪ್ರಭುಗಳು ಬಿಜೆಪಿಗೆ ಆಶೀರ್ವಾದ ಮಾಡಿ ನನ್ನ ಸೇವೆಗೆ ಅವಕಾಶ ಕೊಟ್ಟಿದ್ದಾರೆಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.
Advertisement
ಗುರುವಾರ ಸಂಜೆ ತಾಲೂಕಿನ ನಾಗನೂರ ಪಟ್ಟಣದ ಭಗೀರಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲಹಮ್ಮಿಕೊಂಡಿದ್ದ ನೂತನ ಸಂಸದರ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು,
ತಮ್ಮನ್ನು 1.79 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಆಶೀರ್ವದಿಸಿದ ಮತದಾರರನ್ನು ಅಭಿನಂದಿಸಿದರು.
ಟೀಕೆ-ಟಿಪ್ಪಣಿ ಮಾಡಿದರು. ಅವರ ದುಡ್ಡಿನ ದರ್ಪಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಸ್ವತ: ಅವರ ಕ್ಷೇತ್ರದಲ್ಲಿಯೇ ನನಗೆ 50 ಸಾವಿರ ಮತಗಳ ಮುನ್ನಡೆ ನೀಡಿದ್ದಾರೆ. ಇದರಿಂದಲೇ ಅವರ ಆಡಳಿತ ವೈಖರಿಗೆ ಜನ ಬೇಸತ್ತಿರುವುದು ಗೊತ್ತಾಗುತ್ತದೆ ಎಂದು ಟೀಕಿಸಿದರು. ಈ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ತಮ್ಮ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ಮುಖಂಡರು ನಂಬಿದ್ದರು. ಪ್ರಬುದ್ಧ ಮತದಾರರು ಅದನ್ನು ತಿರಸ್ಕರಿಸಿದರು.
Related Articles
Advertisement
ಈ ಮೂಲಕ ಬೆಳಗಾವಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಜಗದೀಶ ಶೆಟ್ಟರ ತಿಳಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಕಳೆದ 32 ವರ್ಷಗಳಿಂದ ನಮ್ಮ ಸಂಘಟನೆಯ ಬಲವರ್ಧನೆ ಮಾಡಲಾಗಿದೆ. ಸಾಮಾಜಿಕ, ಶೆ„ಕ್ಷಣಿಕ, ಸಹಕಾರ, ಧಾರ್ಮಿಕ ಹಾಗೂ ರಾಜಕೀಯ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ನಮ್ಮ ಸಂಘಟನೆಯ ಕಾರ್ಯಕರ್ತರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕಾಗಿ ಸಾಕಷ್ಟು ಹಿರಿಯರು ದುಡಿದಿದ್ದಾರೆ.
ಮುಂದೆಯೂ ಕೂಡಾ ನಮ್ಮ ಸಂಘಟನೆಗೆ ಅನುಕೂಲ ವಾಗುವಂತೆ ಕಾರ್ಯಕರ್ತರು ನಮ್ಮೊಂದಿಗೆ ಕೈ ಜೋಡಿಸಬೇಕು. ಎಲ್ಲ ಸಮಾಜಗಳ ಬಾಂಧವರು ಅಣ್ಣ-ತಮ್ಮಂದಿರಂತೆ ಬಾಳಬೇಕು. ಸರ್ವ ಸಮಾಜಗಳ ಸವಾಂìಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಯತ್ನಿಸಲಾಗುವುದೆಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಸಹಕಾರದಿಂದ ಅರಭಾವಿಮಠದಿಂದ ಲೋಕಾಪೂರ ವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗೆ ನೂತನ ಸಂಸದರು ಕೇಂದ್ರ ಸರ್ಕಾರದಿಂದ ಅನುದಾನಕ್ಕೆ ಪ್ರಯತ್ನಿಸಬೇಕು. ಅರಭಾವಿ ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಆರಂಭಿಸಲು ಜಗದೀಶ ಶೆಟ್ಟರ ಅವರು ಕೇಂದ್ರ ಮಟ್ಟದಲ್ಲಿ ಒತ್ತಾಯ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕೋರಿದರು.
ಸಂಸದ ಜಗದೀಶ ಶೆಟ್ಟರ್ ಹಾಗೂ ಗೆಲುವಿಗೆ ಕಾರಣೀಕರ್ತರಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅರಭಾವಿ ಬಿಜೆಪಿ ಮಂಡಲದಿಂದ ಸತ್ಕರಿಸಿ ಗೌರವಿಸಲಾಯಿತು. ಹಿರಿಯ ಸಹಕಾರಿ ಬಿ.ಆರ್.ಪಾಟೀಲ (ನಾಗನೂರ), ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಜಿ.ಪಂ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಶ ಪಾಟೀಲ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಭಗೀರಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರು ಬೆಳಗಲಿ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶಕಾಳಶೆಟ್ಟಿ ಉಪಸ್ಥಿತರಿದ್ದರು. ಪರಸಪ್ಪ ಬಬಲಿ ಸ್ವಾಗತಿಸಿದರು. ಬಸವರಾಜ ಮಾಳೇದವರ ನಿರೂಪಿಸಿದರು.ಮಹಾಂತೇಶ ಕುಡಚಿ
ವಂದಿಸಿದರು.