Advertisement

ತುಮಕೂರಿನಲ್ಲಿ ದೇವೇಗೌಡರ ವಿರುದ್ಧ “ಕೈ”ನ ಮುದ್ದಹನುಮೇಗೌಡ ಅಖಾಡಕ್ಕೆ

09:19 PM Mar 23, 2019 | Team Udayavani |

ತುಮಕೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ಸಂದಿಗ್ದತೆಯಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತವಾಗಿರುವ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಬಂಡಾಯ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ.

Advertisement

ಶನಿವಾರ ತುಮಕೂರಿನಲ್ಲಿ ತಮ್ಮ ತೋಟದ ಮನೆಯಲ್ಲಿ ಕಾರ್ಯಕರ್ತರು, ಆಪ್ತರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುದ್ದಹನುಮೇಗೌಡರು, ಪಕ್ಷದ ಟಿಕೆಟ್ ಗಾಗಿ ಇಷ್ಟೊಂದು ಅಂಗಲಾಚುವ ಸ್ಥಿತಿ ಬರುತ್ತದೆ ಅಂತ ಆಲೋಚಿಸಿರಲಿಲ್ಲ. ಹೀಗಾಗಿ ನಾನು ಮಾರ್ಚ್ 25ರಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.

ಮೈತ್ರಿ ಧರ್ಮ ಪಾಲಿಸುವುದಿಲ್ಲವೇ ಎಂಬ ಪ್ರಶ್ನೆಗೆ, ಯಾವುದು ಮೈತ್ರಿ ಧರ್ಮ..ನಾನು ತುಮಕೂರು ಕ್ಷೇತ್ರದ ಸಕ್ರಿಯ ಸಂಸದನಾಗಿ ಕಾರ್ಯನಿರ್ವಹಿಸಿದ್ದೇನೆ. ಹಾಲಿ ಸಂಸದನಿಗೆ ಟಿಕೆಟ್ ನೀಡದೆ ಇರುವುದು ಮೈತ್ರಿ ಧರ್ಮವೇ ಎಂದು ಪ್ರಶ್ನಿಸಿದರು.

ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡರು, ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜು ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡರು ಅಖಾಡಕ್ಕಿಳಿಯುವ ಮೂಲಕ ತ್ರಿಕೋನ ಸ್ಪರ್ಧೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next