Advertisement

ಕಾಂಗ್ರೆಸ್ ಬಿಟ್ಟ ಮುದ್ದಹನುಮೇಗೌಡರ ಬಿಜೆಪಿ ಸೇರ್ಪಡೆ ಬಹುತೇಕ ಫಿಕ್ಸ್!

12:53 PM Sep 03, 2022 | Team Udayavani |

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರುವುದು ಬಹುತೇಕ ಪಕ್ಕಾ ಆಗಿದೆ.

Advertisement

ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿ ಸಂಸದೀಯ‌ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಮುದ್ದಹನುಮೇಗೌಡ ಪಕ್ಷ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ.

ಕುಣಿಗಲ್ ನಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮುದ್ದಹನುಮೇಗೌಡ ಬಯಸಿದ್ದು, ತಮ್ಮ ಉದ್ದೇಶವನ್ನು ಯಡಿಯೂರಪ್ಪ ಅವರ ಮುಂದೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮೋದಿಯಂತಹ ರಾಷ್ಟ್ರಭಕ್ತನನ್ನು ಪಡೆದಿದ್ದು ನಮ್ಮ ಪುಣ್ಯ: ಕೆ.ಎಸ್.ಈಶ್ವರಪ್ಪ

ಪಕ್ಷ ಸೇರ್ಪಡೆಗೆ ಸೂಕ್ತ ವೇದಿಕೆ ಕಲ್ಪಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದು, ಇನ್ನಷ್ಟು ನಾಯಕರ ಜತೆಗೆ ಒಮ್ಮೆಲೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸೋಣ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next