Advertisement

Muddebihal: ಬರಗಾಲದ ಹೊಡೆತ; ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ

08:09 PM Nov 01, 2023 | Team Udayavani |

ಮುದ್ದೇಬಿಹಾಳ: ಬರಗಾಲದ ಹೊಡೆತಕ್ಕೆ ಬೆಳೆಹಾನಿ ಅನುಭವಿಸಿ ಸಾಲ ತೀರಿಸುವುದು ಹೇಗೆನ್ನುವ ಚಿಂತೆಯಲ್ಲಿ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಅಡವಿ ಸೋಮನಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದ್ದು ಬುಧವಾರ ಈ ಕುರಿತು ಪ್ರಕರಣ ದಾಖಲಾಗಿದೆ. ಮೃತನನ್ನು ಸಿದ್ದಪ್ಪ ಬೀರಪ್ಪ ಪೂಜಾರಿ (44) ಎಂದು ಗುರುತಿಸಲಾಗಿದೆ.

Advertisement

ಜಮೀನ ಸಾಗುವಳಿಗಾಗಿ ಅಡವಿ ಸೋಮನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಬ್ಯಾಂಕಿನಲ್ಲಿ 55,000 ರೂ. ಬೆಳೆ ಸಾಲ ಹಾಗೂ ಊರಲ್ಲಿ ಕೈಗಡ 1 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸರಿಯಾಗಿ ಮಳೆಯಾಗದೇ ಬೆಳೆ ಬರದೇ ಇದ್ದುದರಿಂದ ಮಾಡಿದ ಸಾಲವನ್ನ ಹೇಗೆ ತೀರಿಸುವುದು ಎಂದು ನೊಂದು ಮನೆಯಲ್ಲೇ ತೊಗರಿಗೆ ಸಿಂಪಡಿಸಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ನಾಗಮ್ಮ ಪೂಜಾರಿ ಗ್ರಾಮ ವ್ಯಾಪ್ತಿ ಹೊಂದಿರುವ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಸ್ವಾಭಾವಿಕ ಸಾವು ಅಡಿ ಪ್ರಕರಣ ದಾಖಲಿಸಿಕೊಂಡಿರುವ ತಾಳಿಕೋಟೆ ಪೊಲೀಸರು ಕಾನೂನು ಕ್ರಮ ಕೈಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next