Advertisement

Muddebihal; ಮಾನಸಿಕ ಅಸ್ವಸ್ಥ ಮಹಿಳೆ ಕೆರೆಗೆ ಬಿದ್ದು ಮೃತ್ಯು

02:03 PM Jul 02, 2023 | Shreeram Nayak |

ಮುದ್ದೇಬಿಹಾಳ: ಪತಿಯ ಸಾವಿನಿಂದ ಖಿನ್ನತೆಗೊಳಗಾಗಿ ಮಾನಸಿಕ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬಳು ಮುದ್ದೇಬಿಹಾಳ ಪಟ್ಟಣದ ಇಂದಿರಾ ವೃತ್ತದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ.

Advertisement

ಮೃತಳನ್ನು ಬಸವ ನಗರದ ನಿವಾಸಿ ಸುವರ್ಣ ಬಸವರಾಜ ಸವಣೂರ (50) ಎಂದು ಗುರುತಿಸಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ದಂಡೆಗೆ ತಂದಾಗ ಮೃತಳ ಗುರುತು ಪತ್ತೆ ಆಗಿದೆ. ಈಕೆ ಮಾನಸಿಕ ಅಸ್ವಸ್ಥಳಾಗಿದ್ದ ಕಾರಣ ಮನೆಯಿಂದ ಒಬ್ಬಳನ್ನೆ ಹೊರಗೆ ಹೋಗಲು ಬಿಡುತ್ತಿರಲಿಲ್ಲ. ಇವತ್ತು ಇಂದಿರಾ ವೃತ್ತದಲ್ಲಿರುವ ಮಗಳ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಬಂದವಳು ಹೀಗೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಸಹೋದರ ಮಹಾಂತೇಶ ಬುಡ್ಡರ ಪೊಲೀಸರಿಗೆ ತಿಳಿಸಿದ್ದಾರೆ.

ಮೃತಳಿಗೆ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಸೇರಿ ಸಾಕಷ್ಟು ಬಂಧು ಬಳಗ ಇದೆ. ಮುದ್ದೇಬಿಹಾಳ ಪಿಎಸೈ ಆರೀಫ ಮುಷಾಪುರಿ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿ ಕಾನೂನು ಕ್ರಮ ಕೈಕೊಂಡಿದ್ದಾರೆ.

ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next