Advertisement

Mudgal: ಕೌಟುಂಬಿಕ ಕಲಹದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

07:25 PM Aug 10, 2023 | Team Udayavani |

ಮುದಗಲ್ (ರಾಯಚೂರು): ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬರು ಇಬ್ಬರು ಮಕ್ಕಳ ಸಮೇತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.

Advertisement

ಪಟ್ಟಣದ ನಿವಾಸಿ ಚೌಡಮ್ಮ ಹುಲಗಪ್ಪ (27), ಮಕ್ಕಳಾದ ಪ್ರೀತಂ (3) ರಾಮಣ್ಣ (2) ಮೃತಪಟ್ಟ ದುರ್ದೈವಿಗಳು. ಕುಟುಂಬದಲ್ಲಿ ಮೂಡಿದ ಘಟನೆಗಳೇ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆಯಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದು, ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next