Advertisement

ಸಚಿವ ತಿಮ್ಮಾಪುರ ತಾಯಿ ಅಂತ್ಯಕ್ರಿಯೆ

07:25 AM Oct 12, 2017 | Team Udayavani |

ಮುಧೋಳ: ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಅವರ ತಾಯಿ ಸತ್ಯವ್ವ ಬಾಲಪ್ಪ ತಿಮ್ಮಾಪುರ ಅವರ ಅಂತ್ಯಕ್ರಿಯೆ ಸ್ವಗ್ರಾಮ ಉತ್ತೂರಿನಲ್ಲಿ ಬುಧವಾರ ನಡೆಯಿತು. ತಿಮ್ಮಾಪುರ ತಾಯಿಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದರು. 

Advertisement

ಗಣ್ಯರು, ಜನಪ್ರತಿನಿಧಿ ಗಳು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ಸಾರ್ವಜನಿಕರು ತೋಟದ ಮನೆಯಲ್ಲಿ ಇರಿಸಿದ್ದ ಪಾರ್ಥಿವ ಶರೀರದ ದರ್ಶನ ಪಡೆದರು.ಯಡಹಳ್ಳಿಯ ಶ್ರೀ ಚಂದ್ರಶೇಖರ ಸ್ವಾಮೀಜಿ, ಮಹಾಲಿಂಗಪುರದ ಶ್ರೀ ಮಹಾಲಿಂಗೇಶ್ವರ ಸ್ವಾಮೀಜಿ, ಮುಗಳಖೋಡದ ಶ್ರೀ ಚಿನ್ಮಯಾನಂದ ಸ್ವಾಮೀಜಿ, ಶಾಸಕರಾದ ಗೋವಿಂದ ಕಾರಜೋಳ, ಎಚ್‌.ವೈ.ಮೇಟಿ, ಜೆ.ಟಿ.ಪಾಟೀಲ, ಎಸ್‌.ಜಿ.ನಂಜಯ್ಯನಮಠ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಅಜಯಕುಮಾರ ಸರನಾಯಕ, ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ, ಮುತ್ತಪ್ಪ ಕೋಮಾರ  ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next