Advertisement

 Mudigere BJP candidate ದೀಪಕ್ ದೊಡ್ಡಯ್ಯ ಶಕ್ತಿ ಪ್ರದರ್ಶನ

05:29 PM Apr 20, 2023 | Vishnudas Patil |

ಮೂಡಿಗೆರೆ: ಮೂಡಿಗೆರೆ ಎಸ್ ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗುರುವಾರ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶಿಸಿ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಪಕ್ಷದ ಕಚೇರಿಯಿಂದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೃಹತ್ ವೇದಿಕೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.

ಸಿಟಿ ರವಿ ಅವರು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಆಣೆ ಪ್ರಮಾಣದ ವಿಚಾರವನ್ನು ಪ್ರಸ್ತಾಪಿಸಿ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ದೋಖಾ ಮಾಡಿದ ವ್ಯಕ್ತಿ ಎಚ್. ಡಿ. ಕುಮಾರಸ್ವಾಮಿಗೆ ದೋಖಾ ಮಾಡದೆ ಇರ್ತಾರ ಎಂದು ಲೇವಡಿ ಮಾಡಿದರು.

ಕುಮಾರಸ್ವಾಮಿ ವಿರುದ್ಧ ನೇರವಾಗಿ ಕಿಡಿ ಕಾರಿದ ಸಿ ಟಿ ರವಿ, ಬೆಕ್ಕು ಕದ್ದು ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗೋದಿಲ್ವೇ ? ಮೂಡಿಗೆರೆ ಜನಕ್ಕೆ ಕಳ್ಳ ಅಂತ ಗೊತ್ತಿಲ್ವಾ? ಮಧ್ಯಾಹ್ನ ಎಲ್ಲಿ ಮಲಗಿದ್ದ ರಾತ್ರಿಗೆ ಎಲ್ಲಿ ಮಲಗಿದ್ದ ಎಂದು ಮೂಡಿಗೆರೆ ಜನರಿಗೆ ಗೊತ್ತಿದೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next