Advertisement

Mudigere: 4 ದಿನದ ಹಿಂದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ

02:38 PM Dec 24, 2023 | Team Udayavani |

ಮೂಡಿಗೆರೆ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ರವಿವಾರ ಬಾವಿಯಲ್ಲಿ ಪತ್ತೆಯಾಗಿದೆ.

Advertisement

ಮೃತ ಯುವತಿಯನ್ನು ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿ ಎನ್ನುವವರ ಪುತ್ರಿ ಸೃಷ್ಟಿ (19ವರ್ಷ) ಎನ್ನಲಾಗಿದೆ.

ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಸೃಷ್ಟಿ ನಾಪತ್ತೆಯಾಗಿದ್ದಳು. ನಾಪತ್ತೆಯಾದಾಗಿನಿಂದ ಸ್ಥಳೀಯರು ಸೇರಿ ಹುಡುಕಾಟ ನಡೆಸಿದ್ದು ಇಂದು ಬೆಳಿಗ್ಗೆ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಸೃಷ್ಟಿ ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಡಿಸೆಂಬರ್ 21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.

Advertisement

ಇಂದು ಭಾನುವಾರ ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ದೂರು ದಾಖಲಾಗಿದ್ದು ಶವವನ್ನು ಮೇಲೆತ್ತಲು ತಯಾರಿ ನಡೆಸಲಾಗಿದೆ.

ಇದನ್ನೂ ಓದಿ: Chikkamagaluru: ದತ್ತ ಜಯಂತಿಗೆ ಅಧಿಕೃತ ಚಾಲನೆ; ಕರಂದ್ಲಾಜೆ, ಸಿ.ಟಿ ರವಿ ಭಾಗಿ

Advertisement

Udayavani is now on Telegram. Click here to join our channel and stay updated with the latest news.

Next