Advertisement

ಶೌಚಾಲಯವಿದೆ ಬಳಕೆಯೇ ಆಗ್ತಿಲ್ಲ!

12:58 PM Feb 10, 2020 | Naveen |

ಮೂಡಿಗೆರೆ: ಸರ್ಕಾರವು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಸ್ವಚ್ಛ ಭಾರತ್‌, ನಿರ್ಮಲ ಭಾರತ್‌ ಅಭಿಯಾನ ಸೇರಿದಂತೆ ನಾನಾ ಯೋಜನೆಗಳ ಮೂಲಕ ಶೌಚಾಲಯಗಳ ಮಹತ್ವ ಸಾರುವ ಮೂಲಕ ಸಾರ್ವಜನಿಕರಿಗೆ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುತ್ತಿರುವ ಇಂದಿನ ದಿನಗಳಲ್ಲಿ ಪಟ್ಟಣದ ಪೊಲೀಸ್‌ ಸ್ಟೇಷನ್‌ ಎದುರಿನಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿರುವುದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ.

Advertisement

ದಶಕದ ಹಿಂದೆ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಪಟ್ಟಣ ಪಂಚಾಯತಿ ವತಿಯಿಂದ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಲಾಗಿತ್ತು. ಈ ಕಾರ್ಯವು ಅಂದಿನ ದಿನಗಳಲ್ಲಿ ಸಾರ್ವಜನಿಕರ ಪ್ರಶಂಸೆಗೆ ಕೂಡ ಕಾರಣವಾಗಿತ್ತು. ಆದರೆ ದಿನ ಕಳೆದಂತೆ ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಶೌಚಾಲಯವು 7 ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸಾರ್ವಜನಿಕರು ತಮ್ಮ ಶೌಚ ಕಾರ್ಯಗಳನ್ನು ತೀರಿಕೊಳ್ಳಲು ಖಾಲಿ ಜಾಗ ಹುಡುಕಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಶೌಚಾಲಯ ನಿರ್ಮಾಣ ಮಾಡಿರುವ ಸ್ಥಳವು ಪಟ್ಟಣದ ಮುಖ್ಯ ವಾಣಿಜ್ಯ ಕೇಂದ್ರದಲ್ಲಿದ್ದು, ಪಿ.ಡಬ್ಲ್ಯು.ಡಿ ಇಲಾಖೆ, ತಾಲೂಕು ಕಚೇರಿ, ಶಾಸಕರ ಕಚೇರಿ, ಪೊಲೀಸ್‌ ಠಾಣೆ, ಎಲ್‌ಐಸಿ ಕಚೇರಿ, ವ್ಯವಸಾಯ ಸಹಕಾರಿ ಸಂಘ, ಬ್ಯಾಂಕುಗಳು ಸೇರಿದಂತೆ ಹಲವು ವಾಣಿಜ್ಯ ವ್ಯಾಪಾರದ ಜನನಿಬಿಡ ಸ್ಥಳವಾಗಿದೆ. ಸದಾ ಚಟುವಟಿಕೆಯಿಂದ ಕೂಡಿರುವ ಇಂತಹ ಸ್ಥಳದಲ್ಲಿ ಸಾರ್ವಜನಿಕರು ತಮ್ಮ ಶೌಚ ಕಾರ್ಯಗಳನ್ನು ಪೂರೈಸಲು ಪರದಾಡುತ್ತಿದ್ದರು.

ಇಂತಹ ಆಯಕಟ್ಟಿನ ಜಾಗದಲ್ಲಿ ಸಾರ್ವಜನಿಕ ಶೌಚಾಲಯದ ನಿರ್ಮಾಣದ ಒತ್ತಡ ಕೇಳಿ ಬಂದಿದ್ದರಿಂದ ಶೌಚಾಲಯದ ನಿರ್ಮಾಣ ಕಾರ್ಯ ಕೂಡ ಆಗಿತ್ತು. ಆದರೆ ಪಪಂ ಜನಪ್ರತಿನಿಧಿಗಳು ಹಾಗೂ ಅಧಿ ಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಕಟ್ಟಡ ಇದೀಗ ಸರಿಯಾದ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದ್ದು, ಯಾವುದೇ ಉಪಯೋಗಕ್ಕೆ ಬಾರದಂತಾಗಿದೆ.

ಸ್ಥಳೀಯ ಹಾಗೂ ಅಂಗಡಿಯೊಂದರ ಮಾಲೀಕ ಕೇಶವ ಪೂಜಾರಿ ಪ್ರಕಾರ, ನಾನು ಹಲವು ವರ್ಷಗಳಿಂದ ಎಂ.ಜಿ ರಸ್ತೆಯ ಪಕ್ಕದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದೇನೆ. ನನ್ನ ಅಂಗಡಿ ಸೇರಿದಂತೆ ಬಹುತೇಕ ಅಂಗಡಿ ಮಳಿಗೆಗಳ ಕಟ್ಟಡದಲ್ಲಿ ಯಾವುದೇ ಶೌಚಾಲಯಗಳಿಲ್ಲ. ಆದ್ದರಿಂದ ನಮ್ಮ ಶೌಚಾಲಯ ಕಾರ್ಯಗಳನ್ನು ಮುಗಿಸಿಕೊಳ್ಳಲು ಸಾರ್ವಜನಿಕ ಶೌಚಾಲಯದ ಅಗತ್ಯವಿದೆ. ಈ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಒಟ್ಟುಗೂಡಿ ಪಪಂ ಮೇಲೆ ಒತ್ತಡ ತಂದು ನೂತನ ಶೌಚಾಲಯದ ನಿರ್ಮಾಣ ಕಾರ್ಯದಲ್ಲಿ ಯಶಸ್ವಿಯಾಗಿದ್ದೆವು. ಶೌಚಾಲಯ ನಿರ್ಮಾಣವಾಯಿತಾದರೂ ಸೂಕ್ತ ನಿರ್ವಹಣೆಯಿಲ್ಲದೆ ಕೆಲವೇ ದಿನಗಳಲ್ಲಿ ಬಾಗಿಲು ಮುಚ್ಚಲಾಯಿತು. ಇದರಿಂದಾಗಿ ಹಳೇ ಪರಿಸ್ಥಿತಿ ಪುನಃ ಮರುಕಳಿಸಿದೆ. ಇದರೊಂದಿಗೆ ದಿನಕಳೆದಂತೆ ವ್ಯಾಪಾರ, ವಹಿವಾಟುಗಳ ಹೆಚ್ಚಳದೊಂದಿಗೆ ಸಾರ್ವಜನಿಕರ ಓಡಾಟ ಕೂಡ ಹೆಚ್ಚಳವಾಗಿರುವುದರಿಂದ ಶೌಚ ಕಾರ್ಯಗಳಿಗೆ ತೊಂದರೆಯಾಗಿದೆ ಎಂದರು.

Advertisement

ಸರ್ಕಾರಿ ಕಚೇರಿಗಳು, ವ್ಯಾಪಾರ ವಹಿವಾಟುಗಳಿಗೆ ನಿತ್ಯ ಹಳ್ಳಿ ಹಾಗೂ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಂದ ಬರುವ ಸಾರ್ವಜನಿಕರ ಮೂಲ ಅವಶ್ಯಕತೆ ಮರೆತು ಕುಳಿತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಇನ್ನು ಮುಂದಾದರೂ ಸಮಸ್ಯೆ ಬಗೆಹರಿಸಿಕೊಡುವರೇ ಎಂದು ಕಾಯ್ದು ನೋಡಬೇಕಿದೆ.

ಈ ವಿಷಯದ ಬಗ್ಗೆ ಹಲವು ಒತ್ತಾಯಗಳು ಕೇಳಿಬರುತ್ತಿವೆ. ಪಪಂಗೆ
ಆಜ್ಞೆ ಮಾಡುವ ಅಧಿಕಾರ ನಮಗೆ ಇರುವುದಿಲ್ಲ. ಆದರೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ವಿಚಾರವಾಗಿ
ಶಾಸಕರು ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಡುತ್ತೇವೆ.
„ಕೆ.ಸಿ.ರತನ್‌, ತಾಪಂ ಅಧ್ಯಕ್ಷರು.

ಈ ಭಾಗದಲ್ಲಿ ಸಾರ್ವಜನಿಕರ ಶೌಚಾಲಯದ ಅವಶ್ಯಕತೆಯಿದೆ. ಇದ್ದ ಒಂದು ಶೌಚಾಲಯ ನಿರ್ವಹಣೆ ಕಾರಣ ನೀಡಿ ಮುಚ್ಚಲಾಗಿದೆ. ಕಟ್ಟಡ ಭದ್ರವಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಬಾಗಿಲು ಮುಚ್ಚಿದೆ. ಕಟ್ಟಡ ಪುನರ್‌ ನವೀಕರಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು.
„ನವೀನ್‌,
ಆಟೋ ಚಾಲಕರ

ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆಯಿದೆ. ಪಾಳು
ಬಿದ್ದಿರುವ ಹಳೆಯ ಶೌಚಾಲಯದ ಜತೆಗೆ ಇನ್ನೂ ಹೊಸ ಶೌಚಾಲಯಗಳ ನಿರ್ಮಾಣದ ಬಗ್ಗೆ ಸಂಬಂಧಪಟ್ಟ
ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಬಗೆಹರಿಸಿ ಕೊಡಲಾಗುವುದು.
„ಎಚ್‌.ಎಂ.ರಮೇಶ್‌,
ತಹಶೀಲ್ದಾರ್‌

ಸುಧೀರ್‌ ಬಿ.ಟಿ.

Advertisement

Udayavani is now on Telegram. Click here to join our channel and stay updated with the latest news.

Next