Advertisement

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ

11:06 AM Apr 13, 2023 | Team Udayavani |

ಚಿಕ್ಕಮಗಳೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

Advertisement

ಬುಧವಾರ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿಯಲ್ಲಿ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಎಂ.ಪಿ.ಕುಮಾರಸ್ವಾಮಿ ಅವರನ್ನು ಕೈಬಿಟ್ಟು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ಇದರಿಂದ ಬೇಸರಗೊಂಡಿರುವ ಎಂ.ಪಿ.ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಯಿಂದ ಬೇಸತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ:Bollywood: ಒಂದೇ ವಿಮಾನದಲ್ಲಿ ಹಾರಿದ ಮಲೈಕಾ – ಅರ್ಜುನ್:‌ ಮದುವೆಗೆ ರೆಡಿಯಾದ್ರಾ ಮುನ್ನಿ?

ಮೊದಲ ಪಟ್ಟಿಯಲ್ಲೆ ಎಂ.ಪಿ.ಕುಮಾರಸ್ವಾಮಿ ಅವರ ಹೆಸರು ಮಾಯವಾಗಿದ್ದು ಮೂಡಿಗೆರೆ ಕ್ಷೇತ್ರದ ವಿಚಾರದಲ್ಲಿ ಬಿಜೆಪಿಯಲ್ಲಿ ಹೊಸ ಬೆಳವಣಿಗೆ ನಡೆಯುತ್ತಿದೆ ಎಂಬ‌ ಅನುಮಾನ ವ್ಯಕ್ತವಾಗಿದ್ದು, ಎರಡನೇ‌ ಪಟ್ಟಿಯಲ್ಲಿ ಎಂ.ಪಿ.ಕುಮಾರಸ್ವಾಮಿ ಕಿಕ್ ಓಟ್ ಮಾಡಿ ದೀಪಕ್ ದೊಡ್ಡಯ್ಯಗೆ ಟಿಕೆಟ್ ನೀಡಲಾಗಿದೆ.

Advertisement

ಎಂ.ಪಿ.ಕುಮಾರಸ್ವಾಮಿ ಸದ್ಯ ರಾಜೀನಾಮೆ ಸಲ್ಲಿಸಿದ್ದು, ಮುಂದಿನ ನಡೆ ಏನು ಎಂದು ಕಾದು ನೋಡಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next