Advertisement

ಸರಕಾರದ ವಿರುದ್ಧ  ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಧರಣಿ

12:58 AM Aug 13, 2021 | Team Udayavani |

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ  ಬಿಜೆಪಿಯ ಮೂಡಿಗೆರೆಯ ಶಾಸಕ ಎಂ.ಪಿ. ಕುಮಾರಸ್ವಾಮಿ  ವಿಧಾನಸೌಧ ಆವರಣದಲ್ಲಿ ಗುರುವಾರ ಧರಣಿ ನಡೆಸಿದರು.

Advertisement

ಕುಮಾರಸ್ವಾಮಿ ಮಾತನಾಡಿ, ನಮ್ಮ ಧ್ವನಿಗೆ ನಮ್ಮದೇ ಸರಕಾರದಲ್ಲಿ ಯಾಕೋ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಅನ್ನೋ ಕಾರಣಕ್ಕೋ ಏನೋ ಕಡೆಗಣಿಸಲಾಗುತ್ತಿದೆ. ಉಸ್ತುವಾರಿ ಸಚಿವರು ಬರುತ್ತಾರೆ, ಆದರೆ ಏನೂ ಮಾಡುವುದಿಲ್ಲ. ಇವರಿಗೆ ಮಾತಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಶೋಕ್‌ ಭರವಸೆ :

ಸ್ಥಳಕ್ಕೆ ಆಗಮಿಸಿದ ಅಶೋಕ್‌ ಅವರು, ಅನುದಾನ ಸಮಸ್ಯೆ ಆಗಿದೆ, ಬೆಳೆ ಪರಿಹಾರ ನೀಡುವಂತೆ ಕುಮಾರಸ್ವಾಮಿ ವಿನಂತಿಸಿದ್ದಾರೆ.  ಸಿಎಂ ಜತೆ ಮಾತನಾಡಿ ಕೂಡಲೇ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಇದಕ್ಕೊಪ್ಪಿ ಶಾಸಕರು ಧರಣಿಯನ್ನು ಹಿಂಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next