Advertisement

Mudigere; ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

08:09 PM Feb 17, 2024 | Team Udayavani |

ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Advertisement

ಮೂಡಿಗೆರೆ ತಾಲೂಕಿನ ಕಿತ್ತಲೆಗಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್‌ (36) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದರು.

ಈ ಬಗ್ಗೆ ಅವರ ಪತ್ನಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಶನಿವಾರ ಬೆಳಗ್ಗೆ ಕಿತ್ತಲೆಗಂಡಿ ಹೇಮಾವತಿ ಸೇತುವೆಯಿಂದ ಸ್ವಲ್ಪ ಮೇಲ್ಬಾಗದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ನಂತರ ಪರಿಶೀಲಿಸಿದ್ದಾಗ ಅದು ನಾಪತ್ತೆಯಾಗಿದ್ದ ಶಂಕರ್‌ ಅವರ ಮೃತದೇಹವೆಂದು ತಿಳಿದು ಬಂದಿದೆ.

ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಮತ್ತು ಸಮಾಜ ಸೇವಕ ಫಿಶ್‌ ಮೋಣು ತಂಡದವರ ಸಹಾಯದಿಂದ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.

ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಮೃತ ಶಂಕರ್‌ ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಇವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಈ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next