Advertisement

ಮೂಡಿಗೆರೆ: ಇಂದು ಶಾಲಾ ಕಾಲೇಜುಗಳಿಗೆ ರಜೆ

12:28 AM Jul 06, 2019 | Team Udayavani |

ಬೆಂಗಳೂರು: ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಕಡೆ ಮತ್ತು ಒಳನಾಡಿನ ಹೆಚ್ಚಿನ ಕಡೆ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಮುಂಗಾರು ಸಕ್ರಿಯವಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕ ಎನಿಸಿದ 15 ಸೆಂ.ಮೀ. ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ|ಬಗಾದಿ ಗೌತಮ್‌ ಆದೇಶ ಹೊರಡಿಸಿದ್ದಾರೆ.

Advertisement

ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸುರಿದ ಮಳೆ (ಸೆಂ.ಮೀ.ಗಳಲ್ಲಿ) ಯಲ್ಲಾಪುರ, ಮಡಿಕೇರಿ, ಪೊನ್ನಂಪೇಟೆ, ತಾಳಗುಪ್ಪ, ಹುಂಚದಕಟ್ಟೆ, ಆಗುಂಬೆ ತಲಾ 5, ಸಿದ್ದಾಪುರ, ಕಿರವತ್ತಿ, ಲೋಂಡಾ ತಲಾ 4, ಮಂಗಳೂರು ವಿಮಾನ ನಿಲ್ದಾಣ, ಸುಬ್ರಹ್ಮಣ್ಯ, ಕಾರ್ಕಳ, ಶೃಂಗೇರಿ, ಸಕಲೇಶಪುರ, ಬೇಲೂರು ತಲಾ 3, ಮಂಗಳೂರು, ಮೂಡುಬಿದಿರೆ, ಧರ್ಮಸ್ಥಳ, ಉಪ್ಪಿನಂಗಡಿ, ಕುಂದಾಪುರ, ವಿರಾಜಪೇಟೆ, ಸೋಮವಾರಪೇಟೆ ತಲಾ 2 ಸೆಂಟಿ ಮೀಟರ್‌ ಮಳೆಯಾಗಿದೆ. ಭಾನುವಾರ ಮುಂಜಾನೆವರೆಗಿನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next