Advertisement

Ullal ಮುಡಿಪು: ನೇಣುಬಿಗಿದು ಯುವಕ ಆತ್ಮಹತ್ಯೆ

12:31 AM Nov 22, 2023 | Team Udayavani |

ಉಳ್ಳಾಲ: ಕಂಕನಾಡಿಯ ವಾಹನದ ಶೋರೂಂನಲ್ಲಿ ಮೆಕ್ಯಾನಿಕ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್‌ (25) ಮುಡಿಪು ಸಮೀಪದ ಕಾರಿನ ಗ್ಯಾರೇಜ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಕಿಶೋರ್‌ ನ. 20ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ ಇರುವುದನ್ನು ಗಮನಿಸಿ ಮನೆಯ ಸುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಮುಡಿಪುವಿನ ಗ್ಯಾರೇಜ್‌ ಸಮೀಪ ಹುಡುಕಾಡಿದಾಗ ಬೈಕ್‌ ಪತ್ತೆಯಾಗಿದ್ದು, ಒಳಗೆ ಗಮನಿಸಿದಾಗ ನೇಣು ಹಾಕಿಕೊಂಡಿರುವುದು ಗಮನಕ್ಕೆ ಬಂದಿದೆ.

ಕಿಶೋರ್‌ ಕೆಲಸ ಮಾಡುತ್ತಿದ್ದ ಶೋರೂಂನ ಸುಪರ್‌ವೈಸರ್‌ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಆಪ್ತಸ್ನೇಹಿತರಾಗಿದ್ದ ಕಿಶೋರ್‌ ಇದೇ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next