Advertisement

Moodabidri: ಆಟೋ ಚಾಲಕ ಆತ್ಮಹತ್ಯೆ

09:15 PM Dec 31, 2023 | Team Udayavani |

ಮೂಡುಬಿದಿರೆ: ಪ್ರಾಂತ್ಯ ಗ್ರಾಮದ ಕಾಯರ್‌ಗುಂಡಿ ನಿವಾಸಿ, ಅಟೋಚಾಲಕ ಸೋಮೇಶ (54) ತನ್ನ ಮನೆಯ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಭವಿಸಿದೆ.

Advertisement

ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೊಡಂಗಲ್ಲು ಮಹಾಮಾಯಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದು, ಪುರಸಭೆ ಚುನಾವಣೆಯಲ್ಲಿ ಎರಡು ಬಾರಿ ಸ್ಪರ್ಧಿಸಿ ಸೋತಿದ್ದರು.

ಅಪಘಾತ ಸಹಿತ ತುರ್ತು ಸಂದರ್ಭದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ಅಸಹಾಯಕರನ್ನು ತನ್ನ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದರಲ್ಲದೆ, ಶವ ಸಂಸ್ಕಾರ ಮಾಡುವಲ್ಲೂ ಸಹಕರಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next