Advertisement

ದೀಪಾವಳಿಗೆ ‘ಮುಗಿಲ್‌ಪೇಟೆ’ರಂಗು

03:36 PM Oct 01, 2021 | Team Udayavani |

ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ಮನುರಂಜನ್‌ ಅಭಿನಯದ “ಮುಗಿಲ್‌ ಪೇಟೆ’ ತೆರೆಗೆ ಬರಲು ಅಣಿಯಾಗುತ್ತಿದೆ. ಸದ್ಯ “ಮುಗಿಲ್‌ ಪೇಟೆ’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರ ಇದೇ ತಿಂಗಳಲ್ಲಿ ಸೆನ್ಸಾರ್‌ ಮುಂದೆ ಹೋಗಲಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ, ಇದೇ ದೀಪಾವಳಿ ಹಬ್ಬದ ಸಂದರ್ಭದಲ್ಲಿ “ಮುಗಿಲ್‌ ಪೇಟೆ’ ಯನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Advertisement

ಈ ಹಿಂದೆ “ಅಡಚಣೆಗಾಗಿ ಕ್ಷಮಿಸಿ’ ಚಿತ್ರವನ್ನು ನಿರ್ದೇಶಿಸಿದ್ದ ಭರತ್‌ ಎಸ್‌. ನಾವುಂದ “ಮುಗಿಲ್‌ ಪೇಟೆ’ಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. “ಮುಗಿಲ್‌ ಪೇಟೆ’ ಚಿತ್ರದಲ್ಲಿ ಮನುರಂಜನ್‌ಗೆ ನಾಯಕಿಯಾಗಿ ಖಯಾದು ಲೋಹರ್‌ ತೆರೆಮೇಲೆ ಹೆಜ್ಜೆ ಹಾಕಿದ್ದಾರೆ.

ಉಳಿದಂತೆ ರಿಷಿ, ಅವಿನಾಶ್‌, ತಾರಾ ಅನುರಾಧ, ಸಾಧುಕೋಕಿಲ, ರಂಗಾಯಣ ರಘು ಮೊದಲಾದವರು “ಮುಗಿಲ್‌ ಪೇಟೆ’ಯ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರುತ್ತೇನೆ : ಎಂಎಲ್ ಸಿ ಸಂದೇಶ್ ನಾಗರಾಜ್

ಚಿತ್ರದ ಆರು ಹಾಡುಗಳಿಗೆ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತವಿದ್ದು, ಚಿತ್ರಕ್ಕೆ ರವಿವರ್ಮ (ಗಂಗು) ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನವಿದೆ. “ಮೋತಿ ಮೂವೀ ಮೇಕರ್’ ಬ್ಯಾನರ್‌ನಲ್ಲಿ ರಕ್ಷಾ ವಿಜಯ್‌ ಕುಮಾರ್‌ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಮುಗಿಲ್‌ ಪೇಟೆ’ ಟ್ರೇಲರ್‌ ನೋಡುಗರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಚಿತ್ರ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತದೆ ಅನ್ನೋದು ದೀಪಾವಳಿ ಹೊತ್ತಿಗೆ ಗೊತ್ತಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next