Advertisement

ಪ್ರಚಂಡ ಪುಟಾಣಿಗಳಿಗೆ ಮುಹೂರ್ತ

04:32 AM Jun 20, 2020 | Lakshmi GovindaRaj |

ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಪ್ರಾರಂಭವಾಗಬೇಕಿದ್ದ ಪ್ರಚಂಡ ಪುಟಾಣಿಗಳು ಚಲನಚಿತ್ರವು ಕೋವಿಡ್‌ 19 ಸಮಸ್ಯೆಗಳಿಂದ ಚಿತ್ರೀಕರಣ ಮುಂದೂಡಲ್ಪಟ್ಟಿತ್ತು. ಈಗ ಮುಹೂರ್ತವನ್ನು ಆಚರಿಸಿಕೊಂಡಿದೆ. ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪ್ರಚಂಡ ಪುಟಾಣಿಗಳು ಚಲನಚಿತ್ರಕ್ಕೆ ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬಂಡಕೋಟ ಗ್ರಾಮದ ಶ್ರೀ ಸತ್ಯಮ್ಮದೇವಿ ದೇವಾಲಯದಲ್ಲಿ ಮುಹೂರ್ತ ನೆರವೇರಿತು.

Advertisement

ಮಾಸ್ಟರ್ ಧ್ರುವ, ಮಾಸ್ಟರ್ ಶ್ರೀಹರ್ಷ, ಮಾಸ್ಟರ್ ಕೀರ್ತನ್, ಬೇಬಿ ಅಂಕಿತ, ಬೇಬಿ ಸುಪ್ರಿತಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಅವಿನಾಶ್ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದು, ತಾರಾಗಣದಲ್ಲಿ ಕೋಲಾರ್ ಬಾಲು, ಡ್ಯಾನಿ ಕೃಷ್ಣಮೂರ್ತಿ, ನಿಡುವಳ್ಳಿ ರೇವಣ್ಣ, ತಾರೇಹಳ್ಳಿ ಹನುಮಂತಪ್ಪ, ಮದನ್ ಮಂಜು, ಶ್ರೀಕಾಂತ್ ಸಂದೀಪ್ ಬುಲೆಟ್ ರಘು ಮೊದಲಾದವರು ನಟಿಸುತ್ತಿದ್ದಾರೆ.

ರಾಜೀವ್ ಕೃಷ್ಣ ಕಥೆ -ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಪ್ರಮೋದ್ ಭಾರತೀಯ ಛಾಯಾಗ್ರಹಣ,ವಿನಯ್ ಆಲೂರು ಸಂಕಲನ, ಕೋಲಾರ್ ಸುಮಂತ್ ಸ್ಥಿರಚಿತ್ರಣ, ಸುರೇಶ್ ಕಂಬಳಿ ಸಾಹಿತ್ಯ, ವಿನು ಮನಸು ಸಂಗೀತ, ಸುನಿಲ್ ಕುಮಾರ್ ನಿರ್ವಹಣೆ ಚಿತ್ರತಂಡಕ್ಕಿದೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಚಿತ್ರತಂಡ ಕೋಲಾರ ಚಿಕ್ಕಬಳ್ಳಾಪುರ ಸುತ್ತಮುತ್ತ ಭರದಿಂದ ಚಿತ್ರೀಕರಣ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next