Advertisement

ಭಾವಿ ಸೊಸೆಯೊಂದಿಗೆ ಮುಖೇಶ್‌ ಅಂಬಾನಿ ತಿರುಪತಿಗೆ ಭೇಟಿ: 1.5 ಕೋಟಿ ರೂ. ದೇಣಿಗೆ

06:39 PM Sep 16, 2022 | Team Udayavani |

ತಿರುಪತಿ: ಆಂಧ್ರಪ್ರದೇಶದಲ್ಲಿನ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ಉದ್ಯಮಿ ಮುಖೇಶ್ ಅಂಬಾನಿ ಅವರು, ಕಿರಿಯ ಪುತ್ರ ಅನಂತ್‌ ಅಂಬಾನಿಯವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಅವರೊಂದಿಗೆ ಶುಕ್ರವಾರ ಭೇಟಿ, ದೇವಾಲಯಕ್ಕೆ 1.5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

Advertisement

ಇದನ್ನೂ ಓದಿ:ಮಗಳ ಶವ ಬರೋಬ್ಬರಿ 44 ದಿನ ಉಪ್ಪಿನಲ್ಲಿಟ್ಟ ತಂದೆ! ಯಾಕೆ ಗೊತ್ತೇ..

ಶುಕ್ರವಾರ ದೇಗುಲ ಭೇಟಿಗೆ ಮೊದಲು ದೇವಾಲಯದ ಆನೆಗಳಿಗೆ ಆಹಾರ ನೀಡಿದರು. ಬಳಿಕ ಅಭಿಷೇಕ ಹಾಗೂ ನಿಜಪಾದ ದರ್ಶನ ಸೇವೆಯನ್ನು ಅಂಬಾನಿ ಮಾಡಿದರು. ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಧರ್ಮ ರೆಡ್ಡಿಯವರು ಅಂಬಾನಿಯವರನ್ನು ಸ್ವಾಗತಿಸಿದರು ಹಾಗೂ ದರ್ಶನಕ್ಕೆ ವ್ಯವಸ್ಥೆ ಮಾಡಿದರು.

ದರ್ಶನದ ನಂತರ ರಂಗನಾಯಕ ಮಂಟಪದಲ್ಲಿ ವೇದಪಾರಂಗತರಿಂದ ವೇದಘೋಷ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖೇಶ್ ಅಂಬಾನಿ, ತಿರುಮಲಕ್ಕೆ ಭೇಟಿ ನೀಡುವುದು ಅತ್ಯಂತ ಖುಷಿಯ ಸಂಗತಿ. ತಿರುಮಲ ದೇವಸ್ಥಾನ ಪ್ರತಿ ವರ್ಷವೂ ಅಭಿವೃದ್ಧಿ ಹೊಂದುತ್ತಿದೆ. ಎಲ್ಲರಿಗೂ ಒಳ್ಳೆಯದು ಮಾಡು ಎಂದು ವೆಂಕಟೇಶ್ವರ ಸ್ವಾಮಿಯ ಬಳಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next