Advertisement

Mukka: ಈಜಾಡುತ್ತಿದ್ದ ಯುವಕ ಸಮುದ್ರಪಾಲು

09:04 PM Oct 23, 2024 | Team Udayavani |

ಸುರತ್ಕಲ್‌: ಇಲ್ಲಿನ ಮುಕ್ಕ ರೆಡ್‌ ರಾಕ್‌ ಕಡಲ ಕಿನಾರೆಯ ನೀರಿನಲ್ಲಿ ಈಜಾಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

Advertisement

ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್‌ ನಿವಾಸಿ ಕೃಷ್ಣ ಕುಮಾರ್‌ ಸೋಮಯಾಜಿ ಅವರ ಪುತ್ರ ಪ್ರಜ್ವಲ್‌ (21) ನಾಪತ್ತೆಯಾದವರು. ಪ್ರಜ್ವಲ್‌ ಸುಮಾರು 8 ಮಂದಿ ಸ್ನೇಹಿತರ ಜತೆ ಅ. 23ರ ಸಂಜೆ ಮುಕ್ಕ ರೆಡ್‌ ರಾಕ್‌ ಬಳಿಯ ಸಮುದ್ರ ಕಿನಾರೆಯಲ್ಲಿ ಈಜಾಟವಾಡುತ್ತಿದ್ದರು. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಪೊಲೀಸರ ಜತೆಗೂಡಿ ಎಸ್‌ಡಿಆರ್‌ಎಫ್ ತಂಡದವರು ಹಾಗೂ ಸ್ಥಳೀಯ ಮುಳುಗು ತಜ್ಞರು ಹುಡುಕಾಟ ನಡೆಸಿದರೂ, ನಾಪತ್ತೆಯಾದ ಯುವಕನ ಪತ್ತೆಯಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next