Advertisement

ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಆಸ್ಪತ್ರೆಗೆ ದಾಖಲು

09:00 AM Jun 12, 2019 | Vishnu Das |

ಗುರುಗ್ರಾಮ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಅವರನ್ನುಸೋಮವಾರ ರಾತ್ರಿ ಇಲ್ಲಿನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಯಾದವ್‌ ಅವರನ್ನು ಲಕ್ನೋದಿಂದ ವಿಮಾನದಿಂದ ಕರೆತಂದು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ವಕ್ತಾರರು ತಿಳಿಸಿದ್ದಾರೆ.

ಸೋಮವಾರಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮುಲಾಯಂ ಸಿಂಗ್‌ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿದ್ದರು.

79 ರ ಹರೆಯದ ಮುಲಾಯಂ ಅವರ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾದ ಹಿನ್ನಲೆಯಲ್ಲಿ ಭಾನುವಾರ ಎಂದಿನಂತೆ ಪರೀಕ್ಷೆಗಾಗಿ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗಳನ್ನು ನಡೆಸಲಾಗಿತ್ತು.

ಮೇದಾಂತ ಆಸ್ಪತ್ರೆಯ ಅಧಿಕಾರಿಗಳು ಇದುವರೆಗೆ ಮುಲಾಯಂ ಸಿಂಗ್‌ ಅವರ ಆರೋಗ್ಯದ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next