Advertisement

ಒಂಭತ್ತನೇ ವಾರ್ಷಿಕೋತ್ಸವದ ಉದ್ಘಾಟನೆ

01:34 PM Feb 05, 2019 | Team Udayavani |

ಮುಂಬಯಿ: ಅಂಧೇರಿ ಪೂರ್ವದ ಅಂಧೇರಿ-ಕುರ್ಲಾ ರಸ್ತೆಯಲ್ಲಿರುವ ಹೊಟೇಲ್‌ ಪೆನಿನ್ಸುಲಾ ಗ್ರಾÂಂಡ್‌ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಫೆ. 3ರಂದು ಜರಗಿದ ಮೂಲ್ಕಿ ಸುಂದರ್‌ರಾಮ್‌  ಶೆಟ್ಟಿ ಕಾಲೇಜು ಶಿರ್ವ, ಹಳೆ ವಿದ್ಯಾರ್ಥಿ ಸಂಘ ಮುಂಬಯಿ ಇದರ 9ನೇ ವಾರ್ಷಿಕೋತ್ಸವ ಸಮಾರಂಭವನ್ನು ಸಂಘದ ಅಧ್ಯಕ್ಷ ಉದಯ್‌ ಸುಂದರ್‌ ಶೆಟ್ಟಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. 

Advertisement

ವೇದಿಕೆಯಲ್ಲಿ ಮುಖ್ಯ ಅತಿಥಿ, ಹೊಟೇಲ್‌ ಅವೇನ್ಯೂ (ಕಾಂದಿವಲಿ) ನಿರ್ದೇಶಕ ರಘುರಾಮ ಕೆ. ಶೆಟ್ಟಿ, ಗೌರವ ಅತಿಥಿಗಳಾದ ಶಿರ್ವ ಎಂ.ಎಸ್‌.ಆರ್‌.ಎಸ್‌ ಕಾಲೇಜುಪ್ರಾಂಶುಪಾಲ ಕರುಣಾಕರ ನಾಯಕ್‌, ಸಹಾಯಕ ಉಪನ್ಯಾಸಕಿ ಹೇಮಲತಾ ಶೆಟ್ಟಿ, ಕಾಲೇಜಿನ ಸಿಬಂದಿ ವರ್ಗದ ಕುಮಾರಿ ಲಕ್ಷ್ಮೀ, ಗೀತಾ ಕುಮಾರಿ, ಸಂಸ್ಥೆಯ ಉಪಾಧ್ಯಕ್ಷರಾದ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ವಸಂತ್‌ ಎನ್‌. ಶೆಟ್ಟಿ ಫಲಿಮಾರು, ಮೋಹನ್‌ ಶೆಟ್ಟಿ, ಗೌರವ ಕಾರ್ಯದರ್ಶಿ ಜಗದೀಶ್‌ ಬಿ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ರವಿರಾಜ್‌ ಶೆಟ್ಟಿ, ಜತೆ ಕಾರ್ಯದರ್ಶಿ ಸಂದೀಪ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಸಚ್ಚಿದಾನಂದ ಶೆಟ್ಟಿ, ಸಂಚಾಲಕ ಫ್ರಾನ್ಸಿಸ್‌ ವಾಲ್ಟರ್‌ ಮಥಾಯ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಬುನಾ ಎಸ್‌. ಶೆಟ್ಟಿ, ಸಂಸ್ಥೆಯ ಸಲಹೆಗಾರರಾದ ಡಾ| ಶ್ರೀಧರ್‌ ಶೆಟ್ಟಿ,  ನಿತ್ಯಾನಂದ ಶೆಟ್ಟಿ, ಅನಿಲ್‌ ಶೆಟ್ಟಿ ಏಳಿಂಜೆ, ಶರತ್‌ ಶೆಟ್ಟಿ, ಸತೀಶ್‌ ಶೆಟ್ಟಿ, ಎಸ್‌. ಎಂ. ಭಟ್‌ ಉಪಸ್ಥಿತರಿದ್ದರು.    

   ಚಿತ್ರ: ಪ್ರೇಮನಾಥ್‌ ಶೆಟ್ಟಿ  ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next