Advertisement
ಮೊಮ್ಮಗನ ಜತೆಗೆ ಸುರತ್ಕಲ್ನ ಡಾಕ್ಟರ್ ಬಳಿಗೆ ಹೋಗಿ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಚಾಲಕ ಸುರೇಂದ್ರ ಹಾಗೂ ಮೊಮ್ಮಗ ತುಷಾರ್ ಅಪಾಯದಿಂದ ಪಾರಾಗಿದ್ದಾರೆ. ಪುತ್ರ ನಾಗೇಶ್ ಅವರು ತಾಯಿಯನ್ನು ಕೂಡಲೇ ತನ್ನ ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಮಳೆ ಜೋರಾಗಿ ಸುರಿಯುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ತುಂಬಿದ್ದ ನೀರು ಕಾರಿನ ಗ್ಲಾಸ್ನ ಮೇಲೆ ಎರಚಿದ ಪರಿಣಾಮ ಚಾಲಕನ ಹತೋಟಿ ತಪ್ಪಿದ ಕಾರು ಹೊಂಡಕ್ಕೆ ಉರುಳಿಬಿದ್ದಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆದ್ದಾರಿಯಲ್ಲಿ ನೀರು ನಿಲ್ಲುವ ಸಮಸ್ಯೆ ಹಲವೆಡೆ ಕಂಡು ಬರುತ್ತಿದೆ. ಇದರಿಂದಾಗಿ ಈ ಹಿಂದೆಯೂ ಅಪಘಾತ ಸಂಭವಿಸಿದ ಉದಾಹರಣೆಗಳಿವೆ. ಕೋಟ್ಯಂತರ ರೂ. ವ್ಯಯಿಸಿ ನಿರ್ಮಿಸುವ ಹೆದ್ದಾರಿಯಲ್ಲಿ ಉಂಟಾಗಿರುವ ಇಂಥ ಸಮಸ್ಯೆಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.