Advertisement

ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರ ಸಭೆ 

11:59 AM Jan 06, 2018 | Team Udayavani |

ಹಳೆಯಂಗಡಿ: ಮೂಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಜ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೂ. 79 ಕೋ. ರೂ ವೆಚ್ಚದ ವಿವಿಧ ಯೋಜನೆಗಳಿಗೆ ಮೂಡಬಿದಿರೆಯಲ್ಲಿ ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ನಿಂದ 5 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ. ಅಭಯಚಂದ್ರ ಜೈನ್‌ ಹೇಳಿದರು. 

Advertisement

ಹಳೆಯಂಗಡಿಯ ಹರಿ ಓಂ ಸಭಾಂಗಣದಲ್ಲಿ ಜ.4ರಂದು ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ನ ವತಿಯಿಂದ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೂಡಬಿದಿರೆ, ಬಜಪೆ ಹಾಗೂ ಮೂಲ್ಕಿ ಬ್ಲಾಕ್‌ಗಳಿಂದ ಪ್ರತ್ಯೇಕವಾಗಿ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಲಿದ್ದಾರೆ. ವಿವಿಧ ಯೋಜನೆಯ ಫಲಾನುಭವಿಗಳು ಸಹ ಈ ಕಾರ್ಯಕ್ರಮದಲ್ಲಿ ತಮ್ಮ ಸರಕಾರಿ ಸವಲತ್ತುಗಳನ್ನು ಪಡೆಯಲಿದ್ದಾರೆ ಎಂದರು.

ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಮಟ್ಟು ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ, ಮೂಲ್ಕಿ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಹಕೀಂ ಮೂಲ್ಕಿ, ಎಪಿಎಂಸಿ ಅಧ್ಯಕ್ಷ ಪ್ರಮೋದ್‌ಕುಮಾರ್‌, ಕೆಪಿಸಿಸಿ ಸದಸ್ಯ ಎಚ್‌.ವಸಂತ ಬೆರ್ನಾಡ್‌, ಕೆಪಿಸಿಸಿ ಮೊಗವೀರ ಸಮಿತಿಯ ಕ್ಷೇತ್ರದ ಅಧ್ಯಕ್ಷ ತಾರಾನಾಥ್‌, ಪ್ರಧಾನ ಕಾರ್ಯದರ್ಶಿ ಸಂದೀಪ್‌ ಚಿತ್ರಾಪು, ಇಂಟಕ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ಅಂಚನ್‌, ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ ಮತ್ತಿತರರು ಉಪಸ್ಥಿತರಿದ್ದರು. ಮೂಲ್ಕಿ ಬ್ಲಾಕ್‌ನ ವಿವಿಧ ವಲಯದ ಪದಾಧಿಕಾರಿಗಳು, ನಗರ ಪಂಚಾಯತ್‌, ಗ್ರಾಮ ಪಂಚಾಯತ್‌ ಪ್ರತಿನಿಧಿಗಳು, ನಿಗಮ ಮಂಡಳಿಯ ಸದಸ್ಯರು, ಜಿಲ್ಲಾ ಸಮಿತಿಯ ಪ್ರಮುಖರು ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next