Advertisement

ಮುಲ್ಲಾ ನಸ್ರುದ್ದೀನ್‌ ಹಾಗೂ ದೋಣಿ ಯಾತ್ರೆ

10:41 PM Sep 22, 2019 | Sriram |

ಒಂದು ಬಾರಿ ಮುಲ್ಲಾ ನಸ್ರುದ್ದೀನ್‌ ದೋಣಿಯಲ್ಲಿ ಪ್ರಯಾಣ ಬೆಳೆಸುತ್ತಿದ್ದ. ಅವನಂತೆಯೇ ಒಂದಿಷ್ಟು ಸಹಯಾತ್ರಿಕರು ದೋಣಿಯಲ್ಲಿದ್ದರು. ಎಲ್ಲರೂ ಒಂದೇ ಮಟ್ಟದ ಬುದ್ಧಿವಂತರಾಗಿದ್ದರು. ಅದೇ ದೋಣಿಯಲ್ಲಿ ಪರವೂರಿನ ವ್ಯಕ್ತಿಯೊಬ್ಬನಿದ್ದ.

Advertisement

ನೋಡಲು ಉತ್ತಮ ಬಟ್ಟೆಬರೆಯನ್ನು ಧರಿಸಿ ಪಂಡಿತನಂತೆ ಕಾಣುತ್ತಿದ್ದ ಅವನ ಮುಖದಲ್ಲಿ ಗರ್ವ ಎದ್ದು ಕಾಣುತ್ತಿತ್ತು. ಅವನು ನಸ್ರುದ್ದೀನ್‌ ಮುಲ್ಲಾನಲ್ಲಿ ಮಾತಿಗೆ ಆರಂಭಿಸಿದ. ಹೀಗೆ ಮಾತನಾಡುವಾಗ ಮುಲ್ಲಾ ಒಂದು ಪದವನ್ನು ತಪ್ಪಾಗಿ ಉಚ್ಚರಿಸಿದ. ಪಂಡಿತ ಇದನ್ನು ಕೇಳಿ ಮುಲ್ಲಾನನ್ನು ಹಾಸ್ಯ ಮಾಡುತ್ತಾ ಜೀವನದಲ್ಲಿ ನೀನು ಒಮ್ಮೆಯೂ ಅಕ್ಷರಗಳ ಉಚ್ಚಾರವನ್ನೇ ಕಲಿತಿಲ್ಲವೇ ಎಂದು ಕೇಳುತ್ತಾನೆ. ಇಲ್ಲ ಎಂದ ಮುಲ್ಲನಿಗೆ ಹಾಗಾದರೆ ನಿನ್ನ ಅರ್ಧ ಜೀವನ ವ್ಯರ್ಥವಾಯಿತಲ್ಲ ಎನ್ನುತ್ತಾನೆ. ಅಷ್ಟೊತ್ತಿಗೆ ಗಾಳಿ ಜೋರಾಗಿ ಬೀಸಿ ದೋಣಿ ಅಲುಗಾಡ ಲಾರಂಭಿ ಸುತ್ತದೆ. ಆಗ ಮುಲ್ಲ ಪಂಡಿತನಿಗೆ ತಮಗೆ ಈಜಲು ಬರುತ್ತದೆಯೋ ಎಂದು ಕೇಳುತ್ತಾನೆ. ಇಲ್ಲ ಎನ್ನುತ್ತಾನೆ ಪಂಡಿತ. ಆಗ ಮಲ್ಲಾ ಅವನಿಗೆ “ಸ್ವಾಮೀ ಈಗ ನಿಮ್ಮ ಇಡೀ ಜೀವನ ವ್ಯರ್ಥವಾಗುತ್ತದೆ. ಯಾಕೆಂದರೆ ದೋಣಿ ಮುಳುಗುತ್ತಿದೆ. ಬದುಕಬೇಕಾದರೆ ನೀರಿಗೆ ಹಾರಿ ಈಜಲೇ ಬೇಕೆಂದು ಹೇಳಿ ನೀರಿಗೆ ಹಾರುತ್ತಾನೆ…’

Advertisement

Udayavani is now on Telegram. Click here to join our channel and stay updated with the latest news.

Next