Advertisement

ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

10:10 PM Mar 20, 2023 | Team Udayavani |

ಮುಂಬೈ: ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬ್ಯಾಂಕಾಕ್‌ನಿಂದ ನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಭಾನುವಾರ ಮ್ಯಾನ್ಮಾರ್‌ನ ರಂಗೂನ್ (ಯಾಂಗೂನ್) ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Advertisement

“ಇಂಡಿಗೋ ಫ್ಲೈಟ್ 6E-57, ಬ್ಯಾಂಕಾಕ್‌ನಿಂದ ಮುಂಬೈಗೆ ಕಾರ್ಯನಿರ್ವಹಿಸುತ್ತಿದ್ದು, ವಿಮಾನದಲ್ಲಿ ವೈದ್ಯಕೀಯ ತುರ್ತುಸ್ಥಿತಿಯ ಕಾರಣ ರಂಗೂನ್‌ಗೆ ತಿರುಗಿಸಲಾಯಿತು. ದುರದೃಷ್ಟವಶಾತ್, ವಿಮಾನ ಲ್ಯಾಂಡ್ ಆದ ನಂತರ ನಂತರ, ವಿಮಾನ ನಿಲ್ದಾಣದ ವೈದ್ಯಕೀಯ ತಂಡವು ಪ್ರಯಾಣಿಕನ ಮೃತ್ಯು ಸಂಭವಿಸಿದೆ ಎಂದು ಘೋಷಿಸಿದರು ಎಂದು ವಿಮಾನಯಾನ ಸಂಸ್ಥೆ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ. ಇತರ ವಿವರಗಳನ್ನು ಬಹಿರಂಗಪಡಿಸಿಲ್ಲ.

ಇಂಡಿಗೋ ಪ್ರಯಾಣಿಕನೊಬ್ಬ ವಿಮಾನದಲ್ಲಿ ಪ್ರಯಾಣ ಮಧ್ಯದಲ್ಲಿಯೇ ಅಸ್ವಸ್ಥಗೊಂಡು ಸಾವನ್ನಪ್ಪಿದ ಎರಡನೇ ಘಟನೆ ಇದಾಗಿದೆ. ಈ ಹಿಂದೆ ಮಾರ್ಚ್ 17 ರಂದು ರಾಂಚಿ-ಪುಣೆ ಇಂಡಿಗೋ ವಿಮಾನವನ್ನು ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ತುರ್ತುಸ್ಥಿತಿಯ ನಂತರ ನಾಗ್ಪುರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು. ವಿಮಾನ ಇಳಿದ ಬಳಿಕ ವೇಳೆ ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next