Advertisement

ಪತ್ರಕರ್ತನಿಗೆ ಬೆದರಿಕೆ : ನಟ ಸಲ್ಮಾನ್ ಖಾನ್ ಗೆ ಕೋರ್ಟ್ ಸಮನ್ಸ್

10:47 AM Mar 23, 2022 | Team Udayavani |

ಮುಂಬಯಿ : ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ಅವರಿಗೆ 2019 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ಸಲ್ಲಿಸಿದ ದೂರಿನ ಮೇರೆಗೆ ಸ್ಥಳೀಯ ನ್ಯಾಯಾಲಯ ಸಮನ್ಸ್ ನೀಡಿದೆ.

Advertisement

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಆರ್.ಖಾನ್ ಮಂಗಳವಾರ ತಮ್ಮ ಆದೇಶದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳನ್ನು ದಾಖಲು ಮಾಡಲಾಗಿದೆ ಎಂದು ಪೊಲೀಸ್ ವರದಿಯಲ್ಲಿ ಹೇಳಲಾಗಿದೆ. ನ್ಯಾಯಾಲಯವು ಸಮನ್ಸ್ ಹೊರಡಿಸಿ ಏಪ್ರಿಲ್ 5 ರಂದು ಹೆಚ್ಚಿನ ವಿಚಾರಣೆಗೆ ವಿಷಯವನ್ನು ಮುಂದೂಡಿದೆ.

ಪತ್ರಕರ್ತ ಅಶೋಕ್ ಪಾಂಡೆ ಅವರು ತಮ್ಮ ದೂರಿನಲ್ಲಿ ಸಲ್ಮಾನ್ ಖಾನ್ ಮತ್ತು ಶೇಖ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಕೋರಿದ್ದಾರೆ. ಮುಂಬೈನ ಬೀದಿಯಲ್ಲಿ ಸೈಕ್ಲಿಂಗ್ ಮಾಡುವಾಗ ಕೆಲವು ಮಾಧ್ಯಮದವರು ತಮ್ಮ ಫೋಟೋಗಳನ್ನು ಕ್ಲಿಕ್ ಮಾಡಲು ಪ್ರಾರಂಭಿಸಿದಾಗ ನಟ ಸಲ್ಮಾನ್ ತನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡಿದ್ದಾರೆ ಎಂದು ಪಾಂಡೆ ಆರೋಪಿಸಿದ್ದಾರೆ. ನಟ ವಾಗ್ವಾದಕ್ಕೆ ಇಳಿದು ಬೆದರಿಕೆ ಹಾಕಿದ್ದಾರೆ ಎಂದು ಪಾಂಡೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next