Advertisement

ಮುಂಬಯಿ:ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ 

09:07 AM Sep 20, 2017 | Team Udayavani |

ಮುಂಬಯಿ: ನಗರದಲ್ಲಿ ಮಂಗಳವಾರ ಬೆಳಗ್ಗಿನಿಂದ ಭಾರಿ ಮಳೆ ಸುರಿಯುತ್ತಿದ್ದು  ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. 

Advertisement

ಮಳೆ ಹಿನ್ನಲೆಯಲ್ಲಿ ಬುಧವಾರ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸ್ಥಳೀಯ ರೈಲುಗಳು , ವಾಹನಗಳ ಸಂಚಾರದಲ್ಲಿ ಭಾರಿ ವ್ಯತ್ಯವಾಗಿದ್ದು, ವಿಮಾನಗಳ ಸಂಚಾರಕ್ಕೂ ತೊಡಕಾಗಿದೆ. ರಸ್ತೆಗಳು ನೀರು ನಿಂತು ಕೆರೆಯಂತಾಗಿವೆ. 

ಜನರು ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬಿಎಂಸಿ ರಕ್ಷಣಾ ಕಾರ್ಯಕ್ಕಾಗಿ ಸರ್ವ ಸನ್ನದ್ಧವಾಗಿದೆ. 

ಹವಾಮಾನ ಇಲಾಖೆ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು  ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ. 

ಕಳೆದ ತಿಂಗಳಿನಲ್ಲಿ ಸುರಿದ ಕುಂಭದ್ರೋಣ ಮಳೆಗೆ ಮುಂಬಯಿ ನಗರದಲ್ಲಿ 14 ಮಂದಿ ದಾರುಣವಾಗಿ ಬಲಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next