Advertisement

Tragedy: ಬೆಳ್ಳಂಬೆಳಗ್ಗೆ 17 ವರ್ಷದ ಯುವಕನ ಹುಚ್ಚಾಟಕ್ಕೆ ಹಾಲು ವಿತರಕ ಮೃತ್ಯು…

12:00 PM Aug 30, 2024 | Team Udayavani |

ಮುಂಬಯಿ: ಹದಿನೇಳು ವರ್ಷದ ಯುವಕನೊಬ್ಬ ಚಲಾಯಿಸುತ್ತಿದ್ದ ಎಸ್‌ಯುವಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಗೋರೆಗಾಂವ್ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

Advertisement

ಮೃತ ಯುವಕನನ್ನು ನವೀನ್ ವೈಷ್ಣವ್(24) ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿ ಕಾರು ಚಲಾಯಿಸುತ್ತಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದು ಜೊತೆಗೆ ಆತ ಚಲಾಯಿಸುತ್ತಿದ್ದ ಎಸ್‌ಯುವಿ ಕಾರನ್ನು ವಶಕ್ಕೆ ಪಡೆದ ಪೊಲೀಸರು ಕಾರಿನ ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ:
ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆಯ ವೇಳೆಗೆ ಗೋರೆಗಾಂವ್ ಪ್ರದೇಶದ ಕಾಲೊನಿಯೊಂದರಲ್ಲಿ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಅದೇ ಕಾಲೋನಿಯಲ್ಲಿ ಹಾಲು ವಿತರಣೆ ಮಾಡುತ್ತಿದ್ದ ನವೀನ್ ವೈಷ್ಣವ್ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ ಬಳಿಕ ಮುಂದೆ ಸಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಡಿಕ್ಕಿಯ ರಭಸಕ್ಕೆ ನವೀನ್ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತ ನಡೆಸಿದ ಯುವಕ ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಆದರೆ ಅಪಘಾತದಲ್ಲಿ ಆತನೂ ಗಾಯಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ, ಅಷ್ಟೋತ್ತಿಗಾಗಲೇ ಪೊಲೀಸರು ಬಂದು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್‌ಯುವಿ ಕಾರಿನ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ ಮೊಹಮ್ಮದ್ ಫಾಜ್ ಇಕ್ಬಾಲ್ ಜಿವಾನಿ (21) ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಕಾರನ್ನೂ ವಶಕ್ಕೆ ಪಡುದುಕೊಂಡಿದ್ದಾರೆ.

ಅಪಘಾತದ ವೇಳೆ ಯುವಕ ಮದ್ಯದ ಅಮಲಿನಲ್ಲಿದ್ದನೇ ಎಂಬುದನ್ನು ತಿಳಿಯಲು ಯುವಕನ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next