Advertisement

“ವಕೀಲರಿಗೆ ಜುಲೈ ಅಂತ್ಯದವರೆಗೆ ಅವಕಾಶವಿಲ್ಲ”

11:45 AM Jul 04, 2021 | Team Udayavani |

ಮುಂಬಯಿ: ಮಹಾರಾಷ್ಟ್ರ ರಾಜ್ಯ ಕೋವಿಡ್‌-19 ಟಾಸ್ಕ್ ಫೋರ್ಸ್‌ ಸಾಂಕ್ರಾಮಿಕ ರೋಗದ ಮೂರನೇ ಅಲೆ ಕಾಣಿಸಲಿದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಕನಿಷ್ಠ ಜುಲೈ ಅಂತ್ಯದವರೆಗೆ ವಕೀಲರಿಗೆ ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್‌ ಶನಿವಾರ ಹೇಳಿದೆ.

Advertisement

ಮುಂಬಯಿಯ ಸ್ಥಳೀಯ ಉಪನಗರ ರೈಲುಗಳಲ್ಲಿ ವಕೀಲರನ್ನು ಪ್ರಯಾಣದಿಂದ ಹೊರಗಿಟ್ಟಿರುವ ವಿರುದ್ಧ ಮಹಾರಾಷ್ಟ್ರ ಮತ್ತು ಗೋವಾದ ಬಾರ್‌ ಕೌನ್ಸಿಲ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು. ಈ ಕುರಿತು ನ್ಯಾಯಾಂಗ ಆದೇಶದ ಮೂಲಕ ವೈದ್ಯಕೀಯ ತಜ್ಞರ ಅಭಿಪ್ರಾಯವನ್ನು ನ್ಯಾಯಾಲಯ ಅಲ್ಲೇಗಳಿಯಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಜಿ. ಎಸ್‌. ಕುಲಕರ್ಣಿ ಅವರ ವಿಭಾಗೀಯ ಪೀಠ ಹೇಳಿದೆ. ಕನಿಷ್ಠ ಜುಲೈ ಅಂತ್ಯದವರೆಗೆ ವಕೀಲರಿಗೆ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡುವುದು ಅಸಾಧ್ಯ. ಎಲ್ಲರಿಗೂ ರೈಲುಗಳನ್ನು ತೆರೆದರೆ ಮೂರನೇ ಅಲೆ ಪ್ರಾರಂಭವಾಗಬಹುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಭಾವಿಸುತ್ತದೆ. ವಕೀಲರು ಇನ್ನೂ ಒಂದು ತಿಂಗಳು ಕಾಯಬೇಕು ಎಂದು ನ್ಯಾಯಾಲಯ ಹೇಳಿದೆ.

ಪ್ರಸ್ತುತ ರಾಜ್ಯ ಸರಕಾರ ಮತ್ತು ಸಾರ್ವಜನಿಕ ಆಡಳಿತ ಅಧಿಕಾರಿಗಳಿಗೆ ಮಾತ್ರ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಟಾಸ್ಕ್ ಫೋರ್ಸ್‌ ಅಧಿಕಾರಿಗಳೊಂದಿಗಿನ ಆಡಳಿತಾತ್ಮಕ ಸಭೆ ಯಲ್ಲಿ, ಪ್ರಸ್ತುತ ಕೊರೊನಾ ಪರಿಸ್ಥಿತಿ ಆಗಸ್ಟ್‌ ತಿಂಗಳ ವೇಳೆಗೆ ಮಾತ್ರ ಸುಧಾರಿಸುವ ಸಾಧ್ಯತೆ ಯಿದೆ ಎಂದು ನ್ಯಾಯಾಧೀಶರಿಗೆ ತಿಳಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next