Advertisement

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

12:56 PM Sep 28, 2024 | Team Udayavani |

ಮುಂಬೈ: ಸಂಭಾವ್ಯ ಭಯೋತ್ಪಾದಕ ದಾಳಿ ನಡೆಯುವ ಶಂಕೆ ಇದೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈನ ಜನನಿಬಿಢ ಪ್ರದೇಶದಲ್ಲಿ ಶನಿವಾರ (ಸೆ.28) ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಪೊಲೀಸ್‌ ಮೂಲಗಳ ಪ್ರಕಾರ, ಮುಂಬೈನ ಜನದಟ್ಟಣೆ ಹಾಗೂ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಧಾರ್ಮಿಕ ಹಾಗೂ ಜನಸಂದಣಿ ಇರುವ ಪ್ರದೇಶದಲ್ಲಿ ಅಣಕು ಪಥಸಂಚಲನ ನಡೆಸಿರುವುದಾಗಿ ಮೂಲಗಳು ಹೇಳಿವೆ.

ಆಯಾ ಪೊಲೀಸ್‌ ವರಿಷ್ಠಾಧಿಕಾರಿಗಳ ವಲಯದಲ್ಲಿ ಭದ್ರತೆ ಕುರಿತ ವ್ಯವಸ್ಥೆ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮುನ್ನೆಚ್ಚರಿಕೆಯಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ, ವ್ಯಕ್ತಿಗಳು ಕಂಡು ಬಂದರೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ವರದಿ ವಿವರಿಸಿದೆ.

ಮುಂಬೈನಲ್ಲಿ ಗಣೇಶ ಚತುರ್ಥಿಯ ಹತ್ತನೇ ದಿನದ ಸಂಭ್ರಮಾಚರಣೆ ಹಾಗೂ ದುರ್ಗಾ ಪೂಜೆ, ದಸರಾ, ದೀಪಾವಳಿ ಸಿದ್ಧತೆ ನಡೆಯುತ್ತಿರುವ ನಿಟ್ಟಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next