Advertisement

ಪಟ್ಲ ಸಂಭ್ರಮ ಒಡಿಯೂರು ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

03:18 PM Aug 08, 2017 | Team Udayavani |

ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆ. 13ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ನಡೆಯಲಿರುವ ಯಕ್ಷಧ್ರುವ ಪಟ್ಲ ಫೌಂಡೇಷನ್‌ ಟ್ರಸ್ಟ್‌ ಮುಂಬಯಿ ಘಟಕದ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

Advertisement

ಆ. 6ರಂದು ಮಧ್ಯಾಹ್ನ ಚೆಂಬೂರು ಮೈತ್ರಿಪಾರ್ಕ್‌ನ ಶ್ರೀ ಸಾಯಿ ಬಾಬಾ ಮಂದಿರದ ಸಮೀಪದಲ್ಲಿರುವ ಉದ್ಯಮಿ, ಸಮಾಜ ಸೇವಕ  ಮೇರ್ಕಳ ತ್ಯಾಂಪಣ್ಣ ಶೆಟ್ಟಿ ಅವರ ಬಂಗ್ಲೋದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ ಶ್ರೀಗಳು, ಐಕಳ ಹರೀಶ್‌ ಶೆಟ್ಟಿ ಅವರ ಸಂಘಟನ ನಾಯಕತ್ವದಲ್ಲಿ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ. ಒಂದು ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ನೀವೆಲ್ಲರು ಈ ಸಮಾರಂಭಕ್ಕೆ ಇಳಿದಿದ್ದೀರಿ. ಪಟ್ಲ ಸತೀಶ್‌ ಶೆಟ್ಟಿ ಅವರು ಕಲಾವಿದರ ಆಶಾ ಕಿರಣವಾಗಿ ರೂಪಿಸಿರುವ ಫೌಂಡೇಷನ್‌ನ ಎಲ್ಲಾ ಯೋಜನೆಗಳು ಉತ್ತಮ ರೀತಿಯಲ್ಲಿ ಸಾಗಲಿದೆ. ಭಗವಂತನ ಅನುಗ್ರಹ ಸದಾ ನಿಮ್ಮ ಮೇಲಿದೆ ಎಂದು ನುಡಿದು ಕಾರ್ಯಕ್ರಮದ ಯಶಸ್ಸಿಗೆ ಅನುಗ್ರಹಿಸಿದರು.

ಈ ಸಂದರ್ಭ ಸಾಧ್ವಿ ಮಾತಾನಂದಮಯಿ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಟ್ರಸ್ಟ್‌ ಮುಂಬಯಿ ಘಟಕದ ಗೌರವಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಸಂಸ್ಥೆಯ ಸಂಚಾಲಕ ಅಶೋಕ್‌ ಶೆಟ್ಟಿ ಪೆರ್ಮುದೆ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಟ್ರಸ್ಟ್‌

ಮಂಗಳೂರಿನ ಸಂಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಬಂಟರ ಸಂಘ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಗುರುದೇವ ಸೇವಾ ಬಳಗದ ಮಹಾರಾಷ್ಟ್ರ ಘಟಕದ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next