Advertisement

ಮುಂಬಯಿ ನಗರದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ಥ

09:39 AM Jun 29, 2019 | Team Udayavani |

ಮುಂಬಯಿ: ನಗರದಲ್ಲಿ ಶುಕ್ರವಾರ ಬೆಳಗ್ಗಿನಿಂದ ಭಾರೀ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ನಗರದ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆಯಾಗಿದ್ದು, ವಿಮಾನಗಳ ಹಾರಾಟಕ್ಕೂ ತೊಡಕಾಗಿದೆ. ಕೆಲ ರೈಲುಗಳ ಸಂಚಾರದಲ್ಲೂ ವಿಳಂಬವಾಗಿದೆ.

Advertisement

ವಾಶಿ ಪ್ರದೇಶದಲ್ಲಿ ರಸ್ತೆಗಳಲ್ಲೇ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶದ ಜನರು ಆತಂಕಕ್ಕೀಡಾಗಿದ್ದಾರೆ.

ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಬಿಎಂಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಶನಿವಾರವೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಥಾಣೆ , ಪಾಲ್‌ಘಾರ್‌ ಪ್ರದೇಶಗಳಲ್ಲೂ ಭಾರೀ ಮಳೆ ಸುರಿಯುತ್ತಿದೆ.

ಮಳೆಹಿನ್ನಲೆಯಲ್ಲಿ ತೆರೆದಿರುವ ಮ್ಯಾನ್‌ಹೋಲ್‌ಗ‌ಳನ್ನುಮುಚ್ಚಲು ಬಿಎಂಸಿ ಕಾರ್ಯಾಚರಣೆ ಕೈಗೊಂಡಿದೆ. 2017 ರಲ್ಲಿ ಪ್ರಖ್ಯಾತ ವೈದ್ಯ ಡಾ.ದೀಪಕ್‌ ಅಮಾರಾಪುರ್‌ಕರ್‌ ಅವರು ಮ್ಯಾನ್‌ಹೋಲ್‌ಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next