Advertisement

ಮುಂಡಾಜೆ: ಶ್ರೀ ವರಮಹಾಲಕ್ಷ್ಮೀ ಪೂಜೆ

02:22 PM Aug 25, 2018 | |

ಬೆಳ್ತಂಗಡಿ: ಮುಂಡಾಜೆ ಶಾರದಾನಗರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಆಡಳಿತ ಮಂಡಳಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂಡಾಜೆ ಘಟಕ, ಶ್ರೀ ದುರ್ಗಾಪರಮೇಶ್ವರೀ ಭಜನ ಸಂಘ ಶಾರದಾನಗರ ಮುಂಡಾಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಶಾರದಾನಗರ ಇವುಗಳ ಸಹಭಾಗಿತ್ವದಲ್ಲಿ ಶುಕ್ರವಾರ ದೇವಸ್ಥಾನದಲ್ಲಿ ಶ್ರೀ ವರ ಮಹಾಲಕ್ಷ್ಮೀ ಪೂಜೆ ನೆರವೇರಿತು.

Advertisement

ಶಾಸಕ ಹರೀಶ್‌ ಪೂಂಜ ಅವರು ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅಡೂರು ಗೋಪಾಲ ಕೃಷ್ಣ ರಾವ್‌, ಅನಂತ ಭಟ್‌ ಮಚ್ಚಿಮಲೆ, ಪ್ರಧಾನ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ತಾ.ಪಂ. ಸದಸ್ಯೆ ಲೀಲಾವತಿ, ಮುಂಡಾಜೆ ಗ್ರಾ.ಪಂ. ಸದಸ್ಯರಾದ ಚೆನ್ನಕೇಶವ ಹಾಗೂ ಗಣೇಶ್‌ ಬಂಗೇರ, ನಾರಾಯಣ ಗೌಡ ಕೊಳಂಬೆ, ರಾಮಣ್ಣ ಶೆಟ್ಟಿ ಅಗರಿ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯವರು, ದೇವಸ್ಥಾನದ ಆಡಳಿತ ಮಂಡಳಿಯವರು, ಭಜನ ಸಂಘದ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next