Advertisement
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಿವೃತ್ತ ಮೇ| ಜ| ಎಂ.ವಿ. ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಎಸ್. ಗೋಖಲೆ, ಬ್ರಹ್ಮಕಲಶ ಸಮಿತಿ ಉಪಾಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ರಾಮಣ್ಣ ಶೆಟ್ಟಿ ಅಗರಿ, ಗೋಪಾಲಕೃಷ್ಣ ಜೋಶಿ ಕಾಂತ್ಲ, ಪ್ರೇಮಾನಂದ ಫಡ್ಕೆ, ಜತೆ ಕಾರ್ಯದರ್ಶಿ ಬಾಬು ಪೂಜಾರಿ ಕೂಳೂರು, ಸದಾನಂದ ಬಿ. ಮುಂಡಾಜೆ, ವಿವಿಧ ಸಮಿತಿಯ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು. ಬ್ರಹ್ಮಕಲಶ ಸಮಿತಿ ಕಾರ್ಯದರ್ಶಿ, ದೇವಸ್ಥಾನದ ಆಡಳಿತ ಮೊಕ್ತೇಸರ ವೆಂಕಟ್ರಾಯ ಅಡೂರು ಸ್ವಾಗತಿಸಿ, ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ, ಭಜನ ಕಾರ್ಯಕ್ರಮ ನಡೆಯಿತು.
ಎ. 18ರಂದು ಬೆಳಗ್ಗೆಯಿಂದ ವೈದಿಕ ಕಾರ್ಯಕ್ರಮಗಳು, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ. ಶ್ರೀ ಪರಶುರಾಮ ಜಯಂತಿ ಪ್ರಯುಕ್ತ ಮಧ್ಯಾಹ್ನ ಧಾರ್ಮಿಕ ಉಪನ್ಯಾಸ ನಡೆಯಲಿದ್ದು, ಬೆಂಗಳೂರಿನ ವಿಷ್ಣು ಭಟ್ ಡೋಂಗ್ರೆ ಉಪನ್ಯಾಸ ನೀಡಲಿದ್ದಾರೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಎಸ್. ಗೋಖಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.