Advertisement

ಮುಂಡರಗಿ: ಅಕ್ರಮ ಸಾಗುವಳಿ ಭೂಮಿಯ ತೆರವು ವಿರೋಧಿಸಿ ವಿಷ ಸೇವಿಸಿದ್ದ ಮಹಿಳೆ ಸಾವು

07:45 PM Mar 07, 2022 | Team Udayavani |

ಮುಂಡರಗಿ: ಅರಣ್ಯ ಇಲಾಖೆ ನಡೆಸುತ್ತಿರುವ ಅಕ್ರಮ ಸಾಗುವಳಿ ಭೂಮಿಯ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ವಿಷ ಸೇವಿಸಿದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಕೆಲೂರು ಗ್ರಾಮದ ನಿರ್ಮಲಾ ಪಾಟೀಲ (34) ಮೃತ ಮಹಿಳೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ವಾಹನಕ್ಕೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಪೊಲೀಸರು ಬಿಗ್ ಬಂದೋಬಸ್ತ್  ನಲ್ಲಿದ್ದಾರೆ.

ಘಟನೆ ಹಿನ್ನೆಲೆ: ಕಪ್ಪತ್ತಹಿಲ್ಸ್ ಅರಣ್ಯ ಇಲಾಖೆ ನಡೆಸುತ್ತಿರುವ ಅಕ್ರಮ ಸಾಗುವಳಿ ಭೂಮಿಯ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಇಬ್ಬರು ಮಹಿಳೆಯರು ಕ್ರೀಮಿನಾಶಕ ವಿಷ ಸೇವಿಸಿದ್ದರು. ತಕ್ಷಣ

ಇಬ್ಬರನ್ನು ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಆದರೆ ಅವರಲ್ಲಿ ನಿರ್ಮಲಾ ಪಾಟೀಲ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next