Advertisement

Mundgod; ಜಲಾಶಯಕ್ಕೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು

08:11 PM Dec 14, 2023 | Team Udayavani |

ಮುಂಡಗೋಡ: ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.

Advertisement

ಶಿರಸಿ ತಾಲೂಕಿನ ಅಂಡಗಿ ಗ್ರಾಮದ ಅಜೀಜ್ ಗೂಡುಸಾಬ(34) ಎಂಬವನೇ ಸಾವನ್ನಪ್ಪಿದ ಯುವಕ. ಸ್ನೇಹಿತರೊಂದಿಗೆ ಜಲಾಶಯ ವೀಕ್ಷಿಸಲು ಆಗಮಿಸಿದ್ದ ಈತ ಈಜಾಡಲು ನೀರಿಗೆ ಇಳಿದಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ. ಅಗ್ನಿ ಶಾಮಕ ದಳದ ಸಿಬಂದಿಗಳು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next