Advertisement

‘ಮುಂದುವರೆದ ಅಧ್ಯಾಯ’ದಿಂದ ಮತ್ತೂಂದು ಹಾಡು

01:17 PM Dec 21, 2020 | Suhan S |

ಆದಿತ್ಯ ನಾಯಕರಾಗಿರುವ “ಮುಂದುವರೆದ ಅಧ್ಯಾಯ’ ಚಿತ್ರದ ಟ್ರೇಲರ್‌ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿದೆ. ಥ್ರಿಲ್ಲರ್‌ ಅಂಶಗಳೊಂದಿಗೆ ಮೂಡಿಬಂದ ಈ ಟ್ರೇಲರ್‌ಗೆ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ.

Advertisement

ಈಗ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಹಿರಿಯ ಸಂಗೀತ ನಿರ್ದೇಶಕಹಂಸಲೇಖ ಅವರು ಚಿತ್ರದ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಇದನ್ನೂ ಓದಿ :ರವಿ ಶ್ರೀವತ್ಸ ನಿರ್ದೇಶನದ ಎಂಆರ್‌ ಚಿತ್ರಕ್ಕೆ ಆರಂಭದಲ್ಲೇ ವಿಘ್ನ

“ನೀ ಮಾಯಾ ಸಂಚಾರಿ ಬೇಕಿಲ್ಲಾ  ಹೆದ್ದಾರಿ’ ಎಂಬ ಹಾಡು ಬಿಡುಗಡೆಯಾಗಿದ್ದು,ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ, ಶಿವರಾತ್ರಿ ಸಮಯದಲ್ಲಿ ಚಿತ್ರದ ಹಾಡೊಂದು ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಕ್ಲೈಮ್ಯಾಕ್ಸ್‌ಗೂ ಮುನ್ನ ಬರುವ ಈ ಹಾಡು ಶಿವನ ಕುರಿತಾಗಿದ್ದು, ಆ ಕಾರಣದಿಂದ ಚಿತ್ರತಂಡ ಶಿವರಾತ್ರಿ ಸಮಯದಲ್ಲಿ ಬಿಡುಗಡೆ ಮಾಡಿತ್ತು. ಈಗ “ನೀ ಮಾಯಾ ಸಂಚಾರಿ ಬೇಕಿಲ್ಲಾ ಹೆದ್ದಾರಿ…’ ಬಿಡುಗಡೆಯಾಗಿದೆ. ಆದಿತ್ಯ ಅವರ ಈ ಹಿಂದಿನ ಚಿತ್ರಗಳಿಗೆ ಹೋಲಿಸಿದರೆ, “ಮುಂದುವರೆದ ಅಧ್ಯಾಯ’ ವಿಭಿನ್ನವಾಗಿದೆ. ಈ ನಂಬಿಕೆ ಸ್ವತಃ ಆದಿತ್ಯ ಅವರಿಗೂ ಇದೆ. ಬಹುತೇಕ ಅಂಡರ್‌ವರ್ಲ್ಡ್ ಹಿನ್ನೆಲೆಯ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಆದಿತ್ಯ ಈ ಚಿತ್ರದಲ್ಲಿ ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿ ಕೊಂಡಿದ್ದಾರೆ. ಈ ಚಿತ್ರ “ಕಣಜ ಎಂಟರ್‌ಪ್ರೈಸಸ್‌’ನಡಿ ನಿರ್ಮಾಣವಾ ಗಿದ್ದು, ಬಾಲು ಚಂದ್ರಶೇಖರ್‌ ನಿರ್ದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next