Advertisement

ಹೆಸರು ಕಾಳು ಖರೀದಿ ಅವಧಿ ವಿಸ್ತರಣೆ

06:00 AM Dec 21, 2018 | |

ಬೆಳಗಾವಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ಡಿಸೆಂಬರ್‌ 24ರಿಂದ 2019ರ ಜನವರಿ 7ರವರೆಗೂ ಹೆಚ್ಚುವರಿಯಾಗಿ 5 ಸಾವಿರ ಟನ್‌ ಹೆಸರು ಕಾಳು ಖರೀದಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಹಕಾರ ಸಚಿವ ಬಂಡೆಪ್ಪ ಕಾಂಶಪೂರ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಬೆಲೆ ಸ್ಥಿರೀಕರಣ ಸಂಪುಟ ಉಪ ಸಮಿತಿ ಈಗಾಗಲೇ ನೋಂದಾಯಿಸಿಕೊಂಡಿರುವ ಕಲಬುರಗಿ, ಬೀದರ್‌, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ ಹಾಗೂ ಧಾರವಾಡ ಜಿಲ್ಲೆಗಳ ರೈತರಿಂದ ಹೆಸರು ಕಾಳು ಖರೀದಿಸಲು ನಿರ್ಧರಿಸಲಾಗಿದೆ.

Advertisement

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಈಗಾಗಲೇ 2.97 ಲಕ್ಷ ಕ್ವಿಂಟಾಲ್‌ ಹೆಸರುಕಾಳನ್ನು 75,069 ರೈತರಿಂದ ಖರೀದಿ ಮಾಡಲಾಗಿದ್ದು, ಒಟ್ಟು 1,14,549 ರೈತರು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಹೆಸರು ನೋಂದಾಯಿಸಿದ್ದಾರೆ. ಬಾಕಿ ಉಳಿದಿರುವ 39,480 ರೈತರಿಂದ ಹೆಚ್ಚುವರಿಯಾಗಿ 5 ಸಾವಿರ ಟನ್‌ ಹೆಸರು ಕಾಳು ಖರೀದಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next