Advertisement

ಶಾಸಕ ಮುನಿರತ್ನಗೆ ಸಚಿವ ಸ್ಥಾನ ನೀಡಲು ಸಿಎಂ ಒಪ್ಪಿದ್ದಾರೆ: ಭೈರತಿ ಬಸವರಾಜ್

01:50 PM Jun 29, 2021 | Team Udayavani |

ದಾವಣಗೆರೆ: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಖಂಡಿತವಾಗಿಯೂ ಸಚಿವರಾಗುತ್ತಾರೆ ಎಂದು ಬಾಂಬೆ ದೋಸ್ತ್‌ಗಳಲ್ಲಿ ಒಬ್ಬರಾದ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನಂ ಅವರು ಸಚಿವರಾಗುವುದು ಖಂಡಿತ. ಅವರನ್ನು ಮಂತ್ರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ. ಮುನಿರತ್ನ ನಿರಾಶರಾಗುವ ಅವಶ್ಯಕತೆಯೇ ಇಲ್ಲ. ಸಚಿವ ಸ್ಥಾನ ಖಂಡಿತವಾಗಿಯೂ ಸಿಗುತ್ತದೆ ಎಂದರು.

ಇದನ್ನೂ ಓದಿ:ಪರೀಕ್ಷೆ ನಡೆಸಿ ರಾಜ್ಯ ಸರ್ಕಾರ ಜೀವ ,ಜೀವನ ಎರಡನ್ನೂ ತೆಗೆಯಲು ಹೊರಟಿದೆ: ವಿಶ್ವನಾಥ್

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದ 17 ಶಾಸಕರು ನೆಮ್ಮದಿಯಿಂದ ಇಲ್ಲ ಎಂಬ ವಿಧಾನ ಪರಿಷತ್ತು ಸದಸ್ಯ ಎಚ್.ಎಂ. ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು 17 ಜನ ಶಾಸಕರು ನೆಮ್ಮದಿಯಿಂದ ಇದಿವೋ, ಇಲ್ಲವೋ ಎಂಬುದರ ಬಗ್ಗೆ ಸೂಕ್ತ ವೇದಿಕೆಯಲ್ಲೇ ಉತ್ತರ ನೀಡುತ್ತೇವೆ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next