Advertisement
ಕಳೆದ ನಾಲ್ಕೈದು ವರ್ಷದಿಂದ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಉದಯ ಕುಮಾರ್ ಶೆಟ್ಟಿ ಹೆಸರು ಇದ್ದಕ್ಕಿದ್ದಂತೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯಲ್ಲಿತ್ತು. ಆದರೆ ಇದ್ದಕ್ಕಿದ್ದಂತೆ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಲ್ಲವ ಸಮುದಾಯಕ್ಕೆ ಕಾಂಗ್ರೆಸ್ ಮಣೆ ಹಾಕಬಹುದೆಂಬ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ಕೆಲ ಆರ್ ಎಸ್ ಎಸ್ ಮುಖಂಡರು ಹಾಗೂ ಮುಂಬೈ ಮೂಲದ ಉದ್ಯಮಿಗಳ ಪ್ರಭಾವ ಬಳಸಿರುವ ಉದಯಕುಮಾರ್ ಶೆಟ್ಟಿ ಬಿಜೆಪಿಯಿಂದಲೇ ಸ್ಪರ್ಧೆಗೆ ಅವಕಾಶ ನೀಡುವಂತೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಅವರ ಹೆಸರು ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಕೆಲವರು ಸೂಚಿಸಿದ್ದಾರೆ ಎನ್ನಲಾಗಿದೆ.
Related Articles
Advertisement