Advertisement

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

05:44 PM Apr 02, 2023 | Team Udayavani |

ಬೆಂಗಳೂರು : ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ತೀವ್ರ ಪ್ರಯತ್ನ ನಡೆಸಿದ್ದ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕೆಂಬ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾಗಿರುವುದು ಈಗ ಚರ್ಚೆಗೆ ಕಾರಣವಾಗಿದೆ.

Advertisement

ಕಳೆದ ನಾಲ್ಕೈದು ವರ್ಷದಿಂದ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಉದಯ ಕುಮಾರ್ ಶೆಟ್ಟಿ ಹೆಸರು ಇದ್ದಕ್ಕಿದ್ದಂತೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯಲ್ಲಿತ್ತು. ಆದರೆ ಇದ್ದಕ್ಕಿದ್ದಂತೆ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಲ್ಲವ ಸಮುದಾಯಕ್ಕೆ ಕಾಂಗ್ರೆಸ್ ಮಣೆ ಹಾಕಬಹುದೆಂಬ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ಕೆಲ ಆರ್ ಎಸ್ ಎಸ್ ಮುಖಂಡರು ಹಾಗೂ ಮುಂಬೈ ಮೂಲದ ಉದ್ಯಮಿಗಳ ಪ್ರಭಾವ ಬಳಸಿರುವ ಉದಯಕುಮಾರ್ ಶೆಟ್ಟಿ ಬಿಜೆಪಿಯಿಂದಲೇ ಸ್ಪರ್ಧೆಗೆ ಅವಕಾಶ ನೀಡುವಂತೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಅವರ ಹೆಸರು ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಕೆಲವರು ಸೂಚಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿರುವುದು ಈಗ ಉಡುಪಿ ಜಿಲ್ಲಾ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕುಮಟಾ ಕ್ಷೇತ್ರದಿಂದ ಶಶಿಭೂಷಣ್ ಹೆಗಡೆ ಅವರ ಹೆಸರು ಮತ್ತು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ಹೆಸರು ಪ್ರಸ್ತಾಪವಾಗಿದೆ.

ಬೈಂದೂರಿನಲ್ಲಿ ಬಿ.ಎಂ.ಸುಕುಮಾರ ಶೆಟ್ಟಿ, ಕುಮಟಾದಲ್ಲಿ ದಿನಕರ ಶೆಟ್ಟಿ, ಮಂಗಳೂರು ದಕ್ಷಿಣ ದಲ್ಲಿ ವೇದವ್ಯಾಸ ಕಾಮತ್ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next