Advertisement

Mangaluru: ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಬಂಧನ: ಬಜರಂಗದಳ ಖಂಡನೆ

01:03 PM Mar 06, 2024 | Team Udayavani |

ಮಂಗಳೂರು: ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ.

Advertisement

ಕಾಂಗ್ರೆಸ್ ಸರಕಾರವು ಪೊಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲವಂತಹ ಕೆಲಸ ಮಾಡುತ್ತಿದೆ.

ಈ ದೇಶದ್ರೋಹಿ ಕೃತ್ಯವನ್ನು ಬಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಬಜರಂಗದಳ ನಿರಂತರವಾಗಿ ಹೋರಾಟ ನಡೆಸುತ್ತದೆ ನೀವು ನಮನ್ನು ಬಂಧಿಸಿದರು ನಮ್ಮ ಹೋರಾಟ ನಿಲ್ಲದು ಎಂದು ಬಜರಂಗದಳ ಮಂಗಳೂರು ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಸಿದೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ: BSY, ಬೊಮ್ಮಾಯಿ ಕಾಲದಲ್ಲಿ ಇಂತಹ ಘಟನೆ ನಡೆದಿಲ್ಲವೇ? ಸಂತೋಷ್ ಲಾಡ್ ಪ್ರಶ್ನೆ

Advertisement

Udayavani is now on Telegram. Click here to join our channel and stay updated with the latest news.

Next