Advertisement

ಕೊಲೆ ಆರೋಪಿ ಕಾಲಿಗೆ ಗುಂಡೇಟು: ಸೆರೆ

11:50 AM Dec 05, 2018 | Team Udayavani |

ಬೆಂಗಳೂರು: ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲ್‌ ಸದ್ದು ಮಾಡಿದೆ. ಲಾರಿ ಚಾಲಕನನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗೆ ಹೆಣ್ಣೂರು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

Advertisement

ಹೆಣ್ಣೂರಿನ ವಡ್ಡರಪಾಳ್ಯ ನಿವಾಸಿ ಅಭಿಷೇಕ್‌(19) ಗುಂಡೇಟು ತಿಂದು ಬಂಧನಕ್ಕೊಳಗಾದವನು. ಆರೋಪಿಯ ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೇ ವೇಳೆ ಆರೋಪಿಯಿಂದ ಹಲ್ಲೆಗೊಳಗಾದ ಕಾನ್‌ಸ್ಟೆàಬಲ್‌ ಸಂತೋಷ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ನ.30ರಂದು ಹೆಣ್ಣೂರು ಬಂಡೆ ಬಳಿಯ ಬಾರೊಂದರಲ್ಲಿ ಮದ್ಯ ಸೇವಿಸಿ ಹೊರಬರುತ್ತಿದ್ದ ವಡ್ಡರಪಾಳ್ಯ ನಿವಾಸಿ, ಲಾರಿ ಚಾಲಕ ಕೇಶವನನ್ನು ಅಭಿಷೇಕ್‌ ಹಾಗೂ ಬಾಗಲೂರು ಲೇಔಟ್‌ನ ಗುರುಬ್ರಹ್ಮ, ಅವಿನಾಶ್‌, ದಿಲೀಪ್‌ ಮತ್ತು ಅರ್ಜುನ್‌ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು.

ಎಡಗಾಲಿಗೆ ಗುಂಡು: ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಅಭಿಷೇಕ್‌ ಮಂಗಳವಾರ ನಸುಕಿನ ಎರಡು ಗಂಟೆ ಸುಮಾರಿಗೆ ಹೆಣ್ಣೂರು ಬಂಡೆ ಬಳಿ ನಡೆದು ಹೋಗುತ್ತಿದ್ದ. ಈ ಮಾಹಿತಿ ಸಂಗ್ರಹಿಸಿದ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್‌ ಎಚ್‌.ಡಿ.ಕುಲಕರ್ಣಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲು ಮುಂದಾಗಿತ್ತು. 

ಪೊಲೀಸರನ್ನು ಕಂಡ ಕೂಡಲೇ ಪರಾರಿಯಾಗಲು ಯತ್ನಿಸಿದ ಅಭಿಷೇಕ್‌ನನ್ನು ಹಿಡಿಯಲು ಹೋದ ಕಾನ್‌ಸ್ಟೆàಬಲ್‌ ಸಂತೋಷ್‌ಗೆ ಚಾಕುನಿಂದ ಹಲ್ಲೆ ನಡೆಸಿದ್ದು, ಕಾನ್‌ಸ್ಟೆàಬಲ್‌ ಕೈಗೆ ಗಾಯವಾಗಿದೆ. ಈ ವೇಳೆ ಶರಣಾಗುವಂತೆ ಇನ್‌ಸ್ಪೆಕ್ಟರ್‌ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಶರಣಾಗದ ಆರೋಪಿ ಮತ್ತೂಮ್ಮೆ ಕಾನ್‌ಸ್ಟೆàಬಲ್‌ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

Advertisement

ಈ ವೇಳೆ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ಆರೋಪಿಯ ಮೇಲೆ ಎಡಗಾಲಿಗೆ ಗುಂಡು ಹೊಡೆದು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ಹೇಳಿದರು.  ಬಂಧಿತ ಅಭಿಷೇಕ್‌ ವಿರುದ್ಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ ಕಳೆದ 10 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ ಎಂದು ಪೊಲೀಸರು ಹೇಳಿದರು.

ಹಳೇ ದ್ವೇಷವೇ ಕಾರಣ: ಸೆಪ್ಟೆಂಬರ್‌ ಗಣೇಶ ಹಬ್ಬದ ಸಂದರ್ಭದಲ್ಲಿ ವಡ್ಡರಪಾಳ್ಯದಲ್ಲಿ ಗಣಪತಿ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಆರೋಪಿ ಅಭಿಷೇಕ್‌ ಬಾಗಲೂರು ಲೇಔಟ್‌ನ ಸ್ನೇಹಿತರಾದ ಅರ್ಜುನ್‌, ಗುರುಬ್ರಹ್ಮ, ದಿಲೀಪ್‌ ಮತ್ತು ಅವಿನಾಶ್‌ರನ್ನು ಕರೆತಂದು ಡ್ಯಾನ್ಸ್‌ ಮಾಡಿದ್ದ. ಈ ವೇಳೆ ಕ್ಲುಲಕ ಕಾರಣಕ್ಕೆ ಆರೋಪಿ ಅಭಿಷೇಕ್‌ ಮೇಲೆ ಕೇಶವ ಮತ್ತು ಸಾರ್ವಜನಿಕರು ಹಲ್ಲೆ ನಡೆಸಿದ್ದರು.

ಸಾರ್ವಜನಿಕ ಹಲ್ಲೆಯಿಂದ ಆಕ್ರೋಶಗೊಂಡಿದ್ದ ಅಭಿಷೇಕ್‌ ತನ್ನ ನಾಲ್ವರು ಸಹಚರರೊಂದಿಗೆ ಕೇಶವನ ಕೊಲೆಗೆ ಸಂಚು ರೂಪಿಸಿದ್ದ. ಅದರಂತೆ ನ.30ರಂದು ಹೆಣ್ಣೂರು ಬಂಡೆ ಬಳಿ ಕೇಶವನನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.

ಬಟ್ಟೆ ಬದಲಿಸಲು ಬಂದಿದ್ದ: ನ.30ರಂದು ತನ್ನ ಸಹಚರರ ಜತೆ ಸೇರಿ ಕೇಶವನನ್ನು ಹತ್ಯೆಗೈದು ಅದೇ ಬಟ್ಟೆಯಲ್ಲಿ ಅಭಿಷೇಕ್‌ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ವಡ್ಡರಪಾಳ್ಯದಲ್ಲಿರುವ ತನ್ನ ಮನೆಗೆ ಬಂದು ಬಟ್ಟೆ ಬದಲಿಸಿ ಇನ್ನೊಂದಿಷ್ಟು ಬಟ್ಟೆಗಳನ್ನು ತುಂಬಿಕೊಂಡು ತಮಿಳುನಾಡು ಕಡೆ ತಲೆಮರೆಸಿಕೊಳ್ಳಲು ತೀರ್ಮಾನಿಸಿದ್ದ.

ಈ ಮಾಹಿತಿ ಪಡೆದ ಹೆಣ್ಣೂರು ಪೊಲೀಸರು ಡಿ. 4ರ ನಸುಕಿನ 2 ಗಂಟೆ ಸುಮಾರಿಗೆ ಆರೋಪಿ ಹೆಣ್ಣೂರು ಬಂಡೆ ಬಳಿ ಬರುತ್ತಿದ್ದಂತೆ ದಾಳಿ ನಡೆಸಿ ಬಂಧಿಸಿದ್ದಾರೆ. ಸಹಚರರಾದ ಮತ್ತೂಬ್ಬ ಆರೋಪಿ ಗುರುಬ್ರಹ್ಮ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಅರ್ಜುನ್‌, ಅವಿನಾಶ್‌ ಮತ್ತು ದಿಲೀಪ್‌ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next