Advertisement

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

09:03 AM Oct 27, 2021 | Team Udayavani |

ಬಂಟ್ವಾಳ: ಬಿಜೆಪಿ ಮುಂದಾಳು, ಬೆಳ್ಳೂರು ನಿವಾಸಿ‌ ಪ್ರಕಾಶ್ ಅವರ ಮೇಲೆ ಮಂಗಳವಾರ ರಾತ್ರಿ ಯಾರೋ ದುಷ್ಕರ್ಮಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಪ್ರಸ್ತುತ ಅವರು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಘಟನೆಯಲ್ಲಿ ಅವರ ತಲೆಗೆ ಗಾಯವಾಗಿದ್ದು, ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳೀಯರೇ ಹಲ್ಲೆ ನಡೆಸಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಬಂಟ್ವಾಳ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.‌

ಕಳೆದ ರಾತ್ರಿ ನಿತಿನ್ ಬಡಗಬೆಳ್ಳೂರು ಮತ್ತು ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಎಂಬುವವರು ಪ್ರಕಾಶ್​ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಘಟನೆ ನಡೆದಿದೆ.  ಹಲ್ಲೆ ನಡೆದ ವೇಳೆ ಜನ ಸೇರಿದ್ದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next