Advertisement

ಸಿನಿಮೀಯ ರೀತಿಯಲ್ಲಿ ಕಾರು ಅಡ್ಡ ಗಟ್ಟಿ ವ್ಯಕ್ತಿಯ ಕೊಲೆ

09:30 AM Nov 06, 2019 | Team Udayavani |

ಕಲಬುರಗಿ: ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆದು ಸಿನಿಮೀಯ ರೀತಿಯಲ್ಲಿ ಅಡ್ಡ ಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಹೊರವಲಯದ ಶರಣ ಸಿರಸಗಿ ಗ್ರಾಮದ ಬಳಿ ನಡೆದಿದೆ.

Advertisement

ಜೇವರ್ಗಿ ತಾಲೂಕಿನ ಮಯೂರ ಗ್ರಾಮದ ಶಿವಲಿಂಗ ಕೊಲೆಯಾದ ವ್ಯಕ್ತಿ. ಶಿವಲಿಂಗ ತನ್ನ ಕಾರಲ್ಲಿ ತೆರಳುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿ ಹೊಡೆದು, ಆತನ ಮೇಲೆ ದಾಳಿ ಮಾಡಿದ್ದಾರೆ.

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಶಿವಲಿಂಗ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಳೆ ದ್ವೇಷ ಈ ಕೊಲೆಗೆ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next