Advertisement

ವಿರುದ್ಧ  ಸಾಕ್ಷಿ ಹೇಳಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಕೊಲೆ

01:05 AM Feb 24, 2019 | Team Udayavani |

ಹರಪನಹಳ್ಳಿ: ಕೋರ್ಟ್‌ನಲ್ಲಿ ತನ್ನ ವಿರುದ್ಧ  ಸಾಕ್ಷಿ ಹೇಳಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಸಾಕ್ಷಿದಾರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸಾಕ್ಷಿ ಹೇಳಿದ್ದ ಹಲುವಾಗಲು ನಿಂಗಪ್ಪ (30) ಎಂಬಾತನನ್ನು ಕೊಲೆ ಮಾಡಿದ ಬಿಳಿಚೋಡ್‌ ಬಸವರಾಜ್‌(28) ನಂತರ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿಯನ್ನು ಪೊಲೀಸರುವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಡಿವೈಎಸ್ಪಿ ನಾಗೇಶ್‌ ಐತಾಳ್‌ ನೇತೃತ್ವದಲ್ಲಿ ಪೊಲೀಸರ ತಂಡ ಮೊಕ್ಕಾಂ ಹೂಡಿದೆ.

Advertisement

ಕೊಲೆಯಾದ ನಿಂಗಪ್ಪ ಟ್ರ್ಯಾಕ್ಟರ್‌ ಚಾಲಕನಾಗಿದ್ದು, ಎರಡೂವರೆ ವರ್ಷದ ಹಿಂದೆ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಹರಪನಹಳ್ಳಿ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಫೆ.22ರಂದು ಕೋರ್ಟ್‌ಗೆ ಹೋಗಿ ಬಸವರಾಜ್‌ ವಿರುದಟಛಿನಿಂಗಪ್ಪ ಸಾಕ್ಷಿ ಹೇಳಿ ಬಂದಿದ್ದ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆಯ ಬಳಿ ಕುಳಿತಿದ್ದ ನಿಂಗಪ್ಪನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಬಸವರಾಜ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಕುತ್ತಿಗೆಗೆ ಪೆಟ್ಟು ಬಿದ್ದಿದ್ದ ನಿಂಗಪ್ಪನನ್ನು ತಕ್ಷಣವೇ ಹರಿಹರ ಆಸ್ಪತ್ರೆಗೆ ಕರೆತರಲಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹಲುವಾಗಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next