Advertisement

ಪಾರ್ಟಿ ಮಾಡುತ್ತಿದ್ದ ಸ್ನೇಹಿತರಿಂದಲೇ ಯುವಕನ ಕೊಲೆ

09:32 AM Sep 20, 2019 | keerthan |

ಕಲಬುರಗಿ: ಯುವಕನೋರ್ವನನ್ನು ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.

Advertisement

ಪ್ರಶಾಂತ್ ಕೊಟರಗಿ (28) ಕೊಲೆಯಾದ ಯುವಕ. ನಗರದ ಹೊರವಲಯದ ಅಫಜಲ್​ಪುರ ರಸ್ತೆಯ ಖರ್ಗೆ ಕಾಲೋನಿಯ ಮನೆಯೊಂದರಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಪ್ರಶಾಂತ ತನ್ನ ಸ್ನೇಹಿತರೊಡನೆ‌‌ ಪಾರ್ಟಿ ಮಾಡುತ್ತಿದ್ದ. ಈ ವೇಳೆ ಯಾವುದೋ ವಿಷಯಕ್ಕೆ ಜಗಳವಾಗಿದೆ. ಇದೇ ಕೋಪದಲ್ಲಿ‌ ಪ್ರಶಾಂತ್ ನ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಇಂದು ಬೆಳಿಗ್ಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹೇಶ ಮತ್ತು ವಿನೋದ ಕೊಲೆ ಆರೋಪಿಗಳೆಂದು ಗುರುತಿಲಾಗಿದೆ.

ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next