Advertisement

ಬೆಂಗಳೂರು: ಪೊಲೀಸ್ ಮಾಹಿತಿದಾರನಿಗೆ ಇರಿದು ಭೀಕರ ಕೊಲೆ

10:08 AM Jan 27, 2020 | Team Udayavani |

ಬೆಂಗಳೂರು: ನಗರದಲ್ಲಿ  ಪೊಲೀಸ್ ಮಾಹಿತಿದಾರನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.

Advertisement

ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ಈ ಘಟನೆ ನಡೆದಿದ್ದು, ಪ್ರಭು ಅಲಿಯಾಸ್ ಅಪ್ಪು (27) ಕೊಲೆಯಾದ ಯುವಕ.

ಪ್ರಭು ಅವರು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ. ಬ್ಯಾಂಕ್ ನಲ್ಲಿ ಚೆಕ್ ಸಂಗ್ರಹಿಸುವ ಕೆಲಸವನ್ನು ಪ್ರಭು ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ಕೆಲಸ ಮುಗಿಸಿ ಮನೆಗೆ ಮರಳುವ ಸಮಯದಲ್ಲಿ ದುಷ್ಕರ್ಮಿಗಳು ಪ್ರಭು ಅವರನ್ನು ಹಿಂಬಾಲಿಸಿ ಬಂದು ಹಲವು ಬಾರಿ ಇರಿದು ಕೊಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಪ್ರಭು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಭು ಈ ಹಿಂದೆ ಹಲವು ಬಾರಿ ಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎನ್ನಲಾಗಿದೆ. ಅದರಲ್ಲೂ ಎರಡು ಬಾರಿ ರೆಡ್ ಹ್ಯಾಂಡ್ ಆಗಿ ಕಳ್ಳರನ್ನು ಹಿಡಿದಿದ್ದ ಪ್ರಭು ಅವರನ್ನು ಇಂತಹ ಪೂರ್ವ ದ್ವೇಷದಿಂದ ಕೊಲೆಗೈಯಲಾಗಿದೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next