Advertisement

ಸೂರತ್‌ನಲ್ಲಿ ಆರ್‌ಟಿಐ ಕಾರ್ಯಕರ್ತನ ಕೊಲೆ

05:05 AM Jul 21, 2017 | Team Udayavani |

ಸೂರತ್‌: ಗುಜರಾತ್‌ನ ಶಾಲೆಗಳಲ್ಲಿನ ಅವ್ಯವಹಾರಗಳನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತ ರಾಜೇಶ್‌ ಎಂಬವರು ನಿಗೂಢವಾಗಿ ಸಾವಿಗೀಡಾಗಿದ್ದಾರೆ.

Advertisement

ತೀವ್ರ ಗಾಯಗೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಸೂರತ್‌ ನಗರದ ಹಲವು ಶಾಲೆಗಳು ಸರಕಾರದ ಅನುಮತಿ ಇಲ್ಲದೆ ಅಧಿಕಾರಿಗಳ ಮರ್ಜಿಯಲ್ಲಿ ನಡೆಯುತ್ತಿವೆ ಎಂದು ಅಧಿಕಾರಿಗಳಿಗೆ ದೂರು ನೀಡಿದ್ದರು. ಇದಕ್ಕಾಗಿ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next